ಸಾಂದರ್ಭಿಕ ಚಿತ್ರ 
ರಾಜ್ಯ

'ಸೇಡು ತೀರಿಸಿಕೊಳ್ಳಲು ವಿಷಪ್ರಾಶನ'; ಹುಲಿ, ನಾಲ್ಕು ಮರಿಗಳ ಸಾವಿಗೆ ಕಾರಣವಾದ ಮೂವರ ಬಂಧನ

ಗುರುವಾರ ಹುಲಿಗಳ ಕಳೇಬರ ಪತ್ತೆಯಾಗಿದ್ದು, ನಂತರದ ತನಿಖೆಯಲ್ಲಿ ಅವುಗಳಿಗೆ ವಿಷಪ್ರಾಶನ ಮಾಡಿರುವುದು ತಿಳಿದುಬಂದಿದೆ.

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಶನಿವಾರ ಸತ್ತ ಹಸುವಿನ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಹುಲಿಗಳ ಕಳೇಬರ ಪತ್ತೆಯಾಗಿದ್ದು, ನಂತರದ ತನಿಖೆಯಲ್ಲಿ ಅವುಗಳಿಗೆ ವಿಷಪ್ರಾಶನ ಮಾಡಿರುವುದು ತಿಳಿದುಬಂದಿದೆ. ಈ ಘಟನೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತ್ತು.

ಹುಲಿಗಳು ಮೃತಪಟ್ಟಿದ್ದ ಜಾಗದ ಸಮೀಪವೇ ಮಾದ ಅಲಿಯಾಸ್ ಮಾದುರಾಜು ಎಂಬಾತನಿಗೆ ಸೇರಿದ ಹಸುವಿನ ಮೃತದೇಹ ಪತ್ತೆಯಾದ ನಂತರ ವಿಷಪ್ರಾಶನ ಮಾಡಿರುವ ಕುರಿತು ಬೆಳಕಿಗೆ ಬಂದಿತ್ತು.

ಅರಣ್ಯ ಅಧಿಕಾರಿಗಳ ಪ್ರಕಾರ, ಪ್ರೀತಿಯಿಂದ ಸಾಕಿದ್ದ 'ಕೆಂಚಿ' ಎಂಬ ಹೆಸರಿನ ಹಸುವನ್ನು ಹುಲಿಗಳು ಬೇಟೆಯಾಜಿ ಕೊಂದ ನಂತರ ಮಾದುರಾಜು ಕೋಪಗೊಂಡಿದ್ದ ಎಂದು ವರದಿಯಾಗಿದೆ. ಈ ನಷ್ಟದ ಸೇಡು ತೀರಿಸಿಕೊಳ್ಳಲೆಂದು ಮೃತಪಟ್ಟಿದ್ದ ಹಸುವಿನ ದೇಹದ ಮೇಲೆ ವಿಷವನ್ನು ಸಿಂಪಡಿಸಿದ್ದಾನೆ. ಮಾದುರಾಜು ಸ್ನೇಹಿತರಾದ ಕೋನಪ್ಪ ಮತ್ತು ನಾಗರಾಜು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಆರಂಭದಲ್ಲಿ ಹಸುವನ್ನು ಬೇಟೆಯಾಡಿದ್ದ ಹುಲಿ, ತನ್ನ ಮರಿಗಳೊಂದಿಗೆ ಬಂದು ಮತ್ತೆ ಅದನ್ನು ತಿಂದಾಗ ವಿಷದಿಂದಾಗಿ ಸಾವಿಗೀಡಾಗಿವೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಮೂವರು ಶಂಕಿತರನ್ನು ಹೆಚ್ಚಿನ ವಿಚಾರಣೆಗಾಗಿ ಹನೂರು ತಾಲ್ಲೂಕಿನ ಮೀಣ್ಯಂ ಮೂಲದ 'ಅರಣ್ಯ ಭವನ'ಕ್ಕೆ ಕರೆದೊಯ್ಯಲಾಗಿದೆ.

ತನಿಖೆಯ ಸಮಯದಲ್ಲಿ, ಮಾದುರಾಜು ತಂದೆ ಶಿವಣ್ಣ ಪೊಲೀಸರನ್ನು ಸಂಪರ್ಕಿಸಿ ಹುಲಿಗಳ ಸಾವಿಗೆ ತಾನೇ ಕಾರಣ ಎಂದು ಹೇಳಿಕೊಂಡಿದ್ದರು. ಆದರೆ, ತನಿಖೆಯಲ್ಲಿ ಅವರ ಮಗ ಭಾಗಿಯಾಗಿರುವುದು ಬಹಿರಂಗವಾದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT