ಸಿಎಂ ಸಿದ್ದರಾಮಯ್ಯ ನೇತೃತ್ವದ ಸಮಿತಿ ಸಭೆ 
ರಾಜ್ಯ

ನಾಡಹಬ್ಬ ಮೈಸೂರು ದಸರಾ-2025: ಈ ಬಾರಿ 11 ದಿನ ಅದ್ಧೂರಿ ಆಚರಣೆ; ಗಾಂಧೀಜಿ ವಿಚಾರಧಾರೆಗೆ ಆದ್ಯತೆ- ಸಿಎಂ ಸಿದ್ದರಾಮಯ್ಯ

ಈ ಬಾರಿ ರಾಜ್ಯಾದ್ಯಂತ ಮಳೆ- ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಜೃಂಭಣೆ ಭರದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಮೊದಲ ಆದ್ಯತೆ ಇರಲಿ ಎಂದು ಸೂಚಿಸಿದರು.

ಈ ಬಾರಿ ರಾಜ್ಯಾದ್ಯಂತ ಮಳೆ- ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು. ಸೆಪ್ಟೆಂಬರ್ 22 ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10 ದಿನಗಳ ಬದಲು 11 ದಿನಗಳ ಕಾಲ ನಡೆಯಲಿದೆ ಎಂದರು.

ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು, ವಿಶ್ವ ವಿಖ್ಯಾತ ದಸರಾದ ಪರಂಪರೆ ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರಬೇಕು. ಈ ಬಾರಿ ಸ್ತಬ್ಧಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೂ ಸಹ ಅವಕಾಶ ಕಲ್ಪಿಸಬೇಕು ಎಂದರು.

ಕಳೆದ ವರ್ಷ ದಸರಾ ಆಚರಣೆಗೆ ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಅಗತ್ಯವಾದಷ್ಟು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT