ಸಂಗ್ರಹ ಚಿತ್ರ 
ರಾಜ್ಯ

ಜಾತಿ ಗಣತಿ ಸಮೀಕ್ಷೆ ವೇಳೆ BBMP ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು..!

ಸೋಮವಾರ ಮಧ್ಯಾಹ್ನ 1.15 ರಿಂದ 1.45 ರ ನಡುವೆ ಈ ಘಟನೆ ನಡೆದಿದೆ.

ಬೆಂಗಳೂರು: ಜಾತಿ ಗಣತಿ ಸಮೀಕ್ಷೆ ವೇಳೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ವಲಯ ಆಯುಕ್ತರು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ತಂಡವು ಜಾತಿ ಗಣತಿ ಸಮೀಕ್ಷೆಗಾಗಿ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಬಹುಮಹಡಿ ವಸತಿ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ನಿವಾಸಿಯಾಗಿರುವ ಮಹಿಳೆಯೊಬ್ಬರು ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದು, ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ.

ಸೋಮವಾರ ಮಧ್ಯಾಹ್ನ 1.15 ರಿಂದ 1.45 ರ ನಡುವೆ ಈ ಘಟನೆ ನಡೆದಿದೆ. 6ನೇ ಸೆಕ್ಟರ್‌ನ ಎಚ್‌ಎಸ್‌ಆರ್ ಲೇಔಟ್‌ನ 9ನೇ ಮುಖ್ಯ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್ ಸಂಖ್ಯೆ 402 ರಲ್ಲಿ ವಾಸಿಸುವ ಕೆ. ಪವಿತ್ರಾ ವಿರುದ್ಧ ವಲಯ ಆಯುಕ್ತರು ಬುಧವಾರ ದೂರು ದಾಖಲಿಸಿದ್ದಾರೆ.

ಮಹಿಳೆ ತುಂಬಾ ಆಕ್ರಮಣಕಾರಿ ಮತ್ತು ನಿಂದನೀಯಳಾಗಿದ್ದಳು. ಆರಂಭದಲ್ಲಿ ಪೊಲೀಸ್ ದೂರು ದಾಖಲಿಸುವ ಮನಸ್ಸು ನಮಗಿರಲಿಲ್ಲ. ಆದರೆ ಆ ಮಹಿಳೆ ಕ್ಷಮೆಯಾಚಿಸಲಿಲ್ಲ. ಆಕೆ ಮೈಸೂರಿನವಳೆಂದು ಹೇಳಿಕೊಂಡಳು. ಬಾಗಿಲು ತೆರೆದ ತಕ್ಷಣ, ಏರು ಧ್ವನಿಯನ್ನು ಎಚ್ಚರಿಕೆ ನೀಡಿದಳು. ಅವರಿಗೆ ಆಸಕ್ತಿ ಇರದಿದ್ದರೆ, ಮಾಹಿತಿ ನೀಡುವುದಿಲ್ಲ ಎಂದು ಹೇಳಿ ಬಾಗಿಲು ಹಾಕಿಕೊಳ್ಳಬಹುದಿತ್ತು.

ಬದಲಿಗೆ ಏರು ಧ್ವನಿಯಲ್ಲಿ ನಿಂದಿಸುತ್ತಲೇ ಇದ್ದರು. ಈ ಘಟನೆಯಿಂದಾಗಿ ಸ್ಥಳದಲ್ಲಿದ್ದ ಇತರರು ಕೂಡ ಮಾಹಿತಿ ನೀಡಲು ನಿರಾಕರಿಸಿದರು. ಸಂಕೀರ್ಣದಲ್ಲಿ ಸುಮಾರು 10 ಫ್ಲಾಟ್ ಗಳಿವೆ. ಅವರ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಪೊಲೀಸರಿಗೆ ವರದಿ ಮಾಡಬೇಕಾಯಿತು ಎಂದು ತಂಡದ ಭಾಗವಾಗಿದ್ದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬುಧವಾರ ದೂರು ದಾಖಲಿಸಲಾಗಿದದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಈವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಮಹಿಳೆಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಿಳೆ ವಿರುದ್ಧ ಬಿಎನ್'ಸಿ 132 (ಸಾರ್ವಜನಿಕ ಸೇವಕನನ್ನು ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಬಿಎನ್'ಸಿ 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT