ನಾಗರಾಜ್-ಹನುಮಂತಪ್ಪ 
ರಾಜ್ಯ

ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!

ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ‌: ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ನಾಗರಾಜ್​ ಎಂಬಾತನ ಕೊಲೆಯಾಗಿತ್ತು. ಈ ಕೊಲೆ ಮಾಡಿದ ಬಳಿಕ ಆರೋಪಿ ಹನುಮಂತಪ್ಪ ನಡುರಸ್ತೆಯಲ್ಲಿ ಕೇಕೆ ಹಾಕುತ್ತಾ ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ಗಂಗಾವತಿ ತಾಲೂಕಿನ ವೀಠಲಾಪುರ ಗ್ರಾಮದ ನಿವಾಸಿಗಳಾದ ನಾಗರಾಜ್ ಹಾಗೂ ಹನುಮಂತಪ್ಪ ಇಬ್ಬರೂ ಅಕ್ಕ-ಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಒಂದೇ ತಟ್ಟೆಯಲ್ಲಿ ಊಟ ಮಾಡಿ ಬೆಳೆದಿದ್ದವರ ಮಧ್ಯೆ ಸ್ನೇಹ ಕೂಡ ಅಷ್ಟೇ ಗಾಢವಾಗಿತ್ತು. ಆದರೆ ಕಾಮ ಎಂಬುದು ಅವರ ಸ್ನೇಹಕ್ಕೆ ಹುಳಿ ಹಿಂಡಿತ್ತು. ಏಳು ವರ್ಷಗಳ ಹಿಂದೆ ಹನುಮಂತಪ್ಪ ಮದುವೆಯಾಗಿದ್ದನು.

ದಿನಕಳೆದಂತೆ ಇವರ ಬಾಳಲ್ಲಿ ನಾಗರಾಜನ ಎಂಟ್ರಿಯಾಗಿತ್ತು. ತನ್ನ ಪತ್ನಿಯ ಜೊತೆ ನಾಗರಾಜ್ ಸಲುಗೆಯಿಂದ ಇರುವುದನ್ನು ನೋಡಿದ್ದ ಹನುಮಂತಪ್ಪ ಆಕ್ರೋಶಗೊಂಡಿದ್ದನು. ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಮುಂದುವರೆಸದಂತೆ ಹನುಮಂತಪ್ಪ ನಾಗರಾಗ್ ಗೆ ಹಲವು ಬಾರಿ ಎಚ್ಚರಿಸಿದ್ದನು. ಇದ್ಯಾವುದಕ್ಕೂ ನಾಗರಾಜ್ ಕ್ಯಾರೆ ಅಂದಿರಲಿಲ್ಲ.

ಹೀಗಾಗಿ ನಾಗರಾಜನ ಮೇಲೆ ಹಗೆತನ ಬೆಳೆದಿತ್ತು. ಇಂದು ಬೆಳಗ್ಗೆ ನಾಗರಾಜ್ ಗಂಗಾವತಿಗೆ ಹೋಗುತ್ತಿರುವ ವಿಚಾರ ತಿಳಿದ ಹನುಮಂತಪ್ಪ ತನ್ನ ಸಹೋದರ ಸಿದ್ದರಾಮೇಶ್ ಜೊತೆ ಫಾಲೋ ಮಾಡಿಕೊಂಡು ಬಂದು ಮಧ್ಯದಾರಿಯಲ್ಲಿ ಬೈಕ್ ಗೆ ಅಡ್ಡ ಹಾಕಿ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಹನುಮಂತಪ್ಪ ಕನಕಗಿರಿ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆ ಸಹಕರಿಸಿದ ಆರೋಪದ ಮೇಲೆ ಸಿದ್ದರಾಮೇಶನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT