ನಾಗರಾಜ್-ಹನುಮಂತಪ್ಪ 
ರಾಜ್ಯ

ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!

ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ‌: ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ನಾಗರಾಜ್​ ಎಂಬಾತನ ಕೊಲೆಯಾಗಿತ್ತು. ಈ ಕೊಲೆ ಮಾಡಿದ ಬಳಿಕ ಆರೋಪಿ ಹನುಮಂತಪ್ಪ ನಡುರಸ್ತೆಯಲ್ಲಿ ಕೇಕೆ ಹಾಕುತ್ತಾ ಬಂದು ಪೊಲೀಸರಿಗೆ ಶರಣಾಗಿದ್ದಾನೆ.

ಗಂಗಾವತಿ ತಾಲೂಕಿನ ವೀಠಲಾಪುರ ಗ್ರಾಮದ ನಿವಾಸಿಗಳಾದ ನಾಗರಾಜ್ ಹಾಗೂ ಹನುಮಂತಪ್ಪ ಇಬ್ಬರೂ ಅಕ್ಕ-ಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಒಂದೇ ತಟ್ಟೆಯಲ್ಲಿ ಊಟ ಮಾಡಿ ಬೆಳೆದಿದ್ದವರ ಮಧ್ಯೆ ಸ್ನೇಹ ಕೂಡ ಅಷ್ಟೇ ಗಾಢವಾಗಿತ್ತು. ಆದರೆ ಕಾಮ ಎಂಬುದು ಅವರ ಸ್ನೇಹಕ್ಕೆ ಹುಳಿ ಹಿಂಡಿತ್ತು. ಏಳು ವರ್ಷಗಳ ಹಿಂದೆ ಹನುಮಂತಪ್ಪ ಮದುವೆಯಾಗಿದ್ದನು.

ದಿನಕಳೆದಂತೆ ಇವರ ಬಾಳಲ್ಲಿ ನಾಗರಾಜನ ಎಂಟ್ರಿಯಾಗಿತ್ತು. ತನ್ನ ಪತ್ನಿಯ ಜೊತೆ ನಾಗರಾಜ್ ಸಲುಗೆಯಿಂದ ಇರುವುದನ್ನು ನೋಡಿದ್ದ ಹನುಮಂತಪ್ಪ ಆಕ್ರೋಶಗೊಂಡಿದ್ದನು. ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಮುಂದುವರೆಸದಂತೆ ಹನುಮಂತಪ್ಪ ನಾಗರಾಗ್ ಗೆ ಹಲವು ಬಾರಿ ಎಚ್ಚರಿಸಿದ್ದನು. ಇದ್ಯಾವುದಕ್ಕೂ ನಾಗರಾಜ್ ಕ್ಯಾರೆ ಅಂದಿರಲಿಲ್ಲ.

ಹೀಗಾಗಿ ನಾಗರಾಜನ ಮೇಲೆ ಹಗೆತನ ಬೆಳೆದಿತ್ತು. ಇಂದು ಬೆಳಗ್ಗೆ ನಾಗರಾಜ್ ಗಂಗಾವತಿಗೆ ಹೋಗುತ್ತಿರುವ ವಿಚಾರ ತಿಳಿದ ಹನುಮಂತಪ್ಪ ತನ್ನ ಸಹೋದರ ಸಿದ್ದರಾಮೇಶ್ ಜೊತೆ ಫಾಲೋ ಮಾಡಿಕೊಂಡು ಬಂದು ಮಧ್ಯದಾರಿಯಲ್ಲಿ ಬೈಕ್ ಗೆ ಅಡ್ಡ ಹಾಕಿ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಹನುಮಂತಪ್ಪ ಕನಕಗಿರಿ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆ ಸಹಕರಿಸಿದ ಆರೋಪದ ಮೇಲೆ ಸಿದ್ದರಾಮೇಶನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT