ಎಂಎಂ ಹಿಲ್ಸ್ ನಲ್ಲಿ ಸತ್ತ ಹುಲಿಗಳು 
ರಾಜ್ಯ

5 ಹುಲಿಗಳ ಸಾವು: ಎಂಎಂ ಹಿಲ್ಸ್ ಡಿಸಿಎಫ್, ಎಸಿಎಫ್‌ ಸೇರಿ ಮೂವರು ಅಧಿಕಾರಿಗಳಿಗೆ 3 ತಿಂಗಳು ಕಡ್ಡಾಯ ರಜೆ

ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದ ಒಂಬತ್ತು ವರ್ಷದ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವನ್ನಪ್ಪಿದ ನಂತರ, ಅರಣ್ಯ ಪಡೆಯ ಮುಖ್ಯಸ್ಥರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋಮವಾರ ಮೂವರು ಸಿಬ್ಬಂದಿಯನ್ನು ಮೂರು ತಿಂಗಳ ಕಡ್ಡಾಯ ರಜೆಯ ಮೇಲೆ ಕಳುಹಿಸಿ ಆದೇಶ ಹೊರಡಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ ಚಕ್ರಪಾಣಿ, ಹನೂರು ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಣ್ಣ ಹೆಗ್ಡೆ ಮತ್ತು ವನ್ಯಜೀವಿ ಶ್ರೇಣಿ ವಲಯ ಅರಣ್ಯ ಅಧಿಕಾರಿ-ಕಮ್-ಸರ್ವೇಯರ್ ಮಾದೇಶ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

ಬೆಂಗಳೂರು ಪ್ರಧಾನ ಕಚೇರಿಯ ಡಿಸಿಎಫ್ ಸಂತೋಷ್ ಕುಮಾರ್ ಜಿ ಅವರಿಗೆ ಚಕ್ರಪಾಣಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಹೆಗ್ಡೆ ಮತ್ತು ಮಾದೇಶ್ ಅವರ ಬದಲಿಗೆ ಸ್ಟುಪಿಲ್ ಮನೋಹರ್ ಅಹಿರೆ ಮತ್ತು ಉಮಾಪತಿ ಕೆ ಅವರನ್ನು ಕ್ರಮವಾಗಿ ಎಸಿಎಫ್ ಮತ್ತು ಆರ್‌ಎಫ್‌ಒಗಳಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರದ ಆದೇಶದ ಪ್ರಕಾರ, ಯಾವುದೇ ಅಧಿಕಾರಿಯನ್ನು ಮೂರು ತಿಂಗಳಿಗಿಂತ ಹೆಚ್ಚು ಕಾಲ ರಜೆ ಅಥವಾ ಅಮಾನತುಗೊಳಿಸುವಂತಿಲ್ಲ ಎಂದು ಅರಣ್ಯ ಇಲಾಖೆಯ ಮೂಲಗಳು ವಿವರಿಸಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೋಮವಾರ ಹೇಳಿದ್ದಾರೆ.

ಜುಲೈ 27 ರಂದು ಗಸ್ತು ತಂಡ, ಐದು ಹುಲಿಗಳ ಮೃತದೇಹವನ್ನು ಪತ್ತೆ ಹಚ್ಚಿದ ನಂತರ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿನ ಸುದ್ದಿ ಬೆಳಕಿಗೆ ಬಂದಿತು. ಮರಣೋತ್ತರ ಪರೀಕ್ಷೆಯಲ್ಲಿ ವಿಷಪ್ರಾಶನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಜುಲೈ 28 ರಂದು ಮೂವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT