ಸಂಗ್ರಹ ಚಿತ್ರ 
ರಾಜ್ಯ

ಕಾಡು ಪ್ರಾಣಿಗಳ ಬೇಟೆ ಜಾಲ ಪತ್ತೆ; ಓರ್ವ ಆರೋಪಿ ಬಂಧನ, 74 ಕೆಜಿ ಜಿಂಕೆ ಮಾಂಸ ವಶಕ್ಕೆ

ಅರಣ್ಯ ಅಧಿಕಾರಿಗಳು ಸಿಕೆ ಪಾಳ್ಯ ಬಳಿ ಸುಮಾರು 74 ಕೆಜಿ ಜಿಂಕೆ ಮಾಂಸ ಮತ್ತು ಆರು ಚುಕ್ಕೆ ಜಿಂಕೆಗಳ ಚರ್ಮವನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಜಿಂಕೆಗಳು ಮತ್ತು ಕಾಡು ಹಂದಿಗಳನ್ನು ಬೇಟೆಯಾಡಿ ಅವುಗಳ ಮಾಂಸ, ಚರ್ಮ, ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆಂಗಳೂರು ನಗರ ಅರಣ್ಯಾಧಿಕಾರಿಗಳು, 4 ಜಿಂಕೆ ಹಾಗೂ ಮತ್ತು 1 ಕಾಡು ಹಂದಿ ಮತ್ತು 74 ಕೆಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸುತ್ತಿದ್ದ 2 ಬಂದೂಕು, 2 ಕಾರು, ಬೈಕ್'ನ್ನು ಜಪ್ತಿ ಮಾಡಿದ್ದಾರೆ.

ವನ್ಯಜೀವಿ ಮಾಂಸ ವ್ಯಾಪಾರಕ್ಕಾಗಿ ಆರೋಪಿಗಳು ಒಂಬತ್ತು ಜಿಂಕೆ ಮತ್ತು ಒಂದು ಕಾಡುಹಂದಿಯನ್ನು ಕೊಂದಿದ್ದು, ಸುಳಿವಿನ ಆಧಾರದ ಮೇಲೆ ಬೆಂಗಳೂರು ನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ನೇತೃತ್ವದ ತಂಡವು ಕಗ್ಗಲಿಪುರ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಶನಿವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಎರಡು ಕಾರುಗಳನ್ನು ತಡೆಹಿಡಿದು. ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮೂವರು ಶಂಕಿತರು ಪರಾರಿಯಾಗಿದ್ದು, ಓರ್ವ ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರತಾಪ್ (31) ಎಂದು ಗುರ್ತಿಸಲಾಗಿದೆ.

ಅರಣ್ಯ ಅಧಿಕಾರಿಗಳು ಸಿಕೆ ಪಾಳ್ಯ ಬಳಿ ಸುಮಾರು 74 ಕೆಜಿ ಜಿಂಕೆ ಮಾಂಸ ಮತ್ತು ಆರು ಚುಕ್ಕೆ ಜಿಂಕೆಗಳ ಚರ್ಮವನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

ಹೆಚ್ಚುವರಿಯಾಗಿ, ಒಂದು ಡಬಲ್ ಬ್ಯಾರೆಲ್ ಮತ್ತು ಒಂದು ಸಿಂಗಲ್ ಬ್ಯಾರೆಲ್ ರೈಫಲ್ ಜೊತೆಗೆ 10 ಜೀವಂತ ಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಈ ಗ್ಯಾಂಗ್ ಎಷ್ಟು ಸಮಯದಿಂದ ಸಕ್ರಿಯವಾಗಿದೆ ಮತ್ತು ಬೇಟೆ ಜಾಲದಲ್ಲಿ ಬೇರೆ ಯಾರು ಭಾಗಿಯಾಗಿರಬಹುದು ಎಂಬುದರ ಕುರಿತು ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸೀಟ್ ಚಾರ್ಜ್‌ಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಇನ್ನು ಮುಂದೆ ಶೇ.60ರಷ್ಟು ಸೀಟುಗಳು ಉಚಿತ..!

ಅಸ್ಸಾಂನಲ್ಲಿ ಕಾಂಗ್ರೆಸ್ ಗೆ ಭಾರಿ ಹೊಡೆತ: ಹಿರಿಯ ನಾಯಕ ಪ್ರದ್ಯುತ್ ಬೊರ್ಡೊಲೊಯಿ ಬಿಜೆಪಿಗೆ ಸೇರ್ಪಡೆ!

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!

ಬೆಂಗಳೂರು: ಜೀವಂತ ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಗೆ ಯತ್ನಿಸಿದ ಮಹಿಳೆ!ಮುಂದೇನಾಯ್ತು? ಈ Video ನೋಡಿ...

SCROLL FOR NEXT