ಸಾಂದರ್ಭಿಕ ಚಿತ್ರ 
ರಾಜ್ಯ

ಸಂಡೂರಿನಲ್ಲಿ ಹಕ್ಕಿ ಜ್ವರದಿಂದ 2000 ಕೋಳಿಗಳು ಸಾವು: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಒಂದೇ ವಾರದಲ್ಲಿ 2,100 ಪಕ್ಷಿಗಳು ಮೃತಪಟ್ಟಿವೆ. ಈ ಪೈಕಿ 1,100 ಮಂದಿ ಹಕ್ಕಿ ಜ್ವರ ಎಂದು ದೃಢಪಡಿಸಿದ ನಂತರ ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ

ಸಂಡೂರು: ಗಣಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದರಿಂದ ಪೌಲ್ಟ್ರಿ ಫಾರಂ ಮಾಲೀಕರಲ್ಲಿ ನಡುಕು ಶುರುವಾಗಿದ್ದು, ಸಂಡೂರು ತಾಲೂಕಿನ ಸರಕಾರಿ ಪೌಲ್ಟ್ರಿ ಫಾರಂನಲ್ಲಿ 2400 ಕೋಳಿಗಳು ಸಾವನ್ನಪ್ಪಿವೆ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಸುಮಾರು 20 ರಿಂದ 30 ಪಕ್ಷಿಗಳು ಕೇಂದ್ರದಲ್ಲಿ ಸತ್ತಿವೆ ಅಥವಾ ಸಾಯುವ ಹಂತದಲ್ಲಿವೆ. ಪ್ರತಿದಿನ ಸುಮಾರು 100 ರಿಂದ 200 ಪಕ್ಷಿಗಳು ಸಾಯುತ್ತಿದ್ದವು. ನಾವು ಸತ್ತ ಕೋಳಿಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಮತ್ತು ಅಲ್ಲಿ ನಡೆಸಿದ ಪರೀಕ್ಷೆಗಳಿಂದ, ಅವು ಹಕ್ಕಿ ಜ್ವರದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದೇ ವಾರದಲ್ಲಿ 2,100 ಪಕ್ಷಿಗಳು ಮೃತಪಟ್ಟಿವೆ. ಈ ಪೈಕಿ 1,100 ಮಂದಿ ಹಕ್ಕಿ ಜ್ವರ ಎಂದು ದೃಢಪಡಿಸಿದ ನಂತರ ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಇಲಾಖೆಯ ಉಪ ನಿರ್ದೇಶಕ ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹಕ್ಕಿಜ್ವರ ಕಾಣಿಸಿಕೊಂಡ ಕುರೆಕುಪ್ಪ ಗ್ರಾಮದ ಒಂದು ಕಿಮೀ ವ್ಯಾಪ್ತಿಯನ್ನು ಪಶು ಇಲಾಖೆ ಈಗಾಗಲೇ ಅಪಾಯಕಾರಿ ವಲಯ ಎಂದು ಗುರುತಿಸಿದೆ. ತೋರಣಗಲ್ಲು, ಕುರೆಕುಪ್ಪ, ವಡ್ಡು, ತಾಳೂರು, ಬಸ್ಸಾಪುರ, ದರೋಜಿ, ದೇವಲಾಪುರ ಸೇರಿ 10 ಕಿಮೀ ವ್ಯಾಪ್ತಿ ಪ್ರದೇಶವನ್ನು ಕಣ್ಣಾವಲು ಪ್ರದೇಶ ಎಂದು ಗುರುತಿಸುವ ಮೂಲಕ ಹಕ್ಕಿ ಜ್ವರ ಉಲ್ಬಣಗೊಳ್ಳದಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಂಡಿದೆ.

ಹಕ್ಕಿ ಜ್ವರ ವೈರಾಣುಗಳಿಂದ ಹರಡುತ್ತದೆ. ಸೋಂಕು ತಗುಲಿದ ಹಕ್ಕಿಗಳು ವಿಸರ್ಜಿಸುವ ಮಲ-ಮೂತ್ರದಿಂದ ಈ ರೋಗ ಹರಡುತ್ತದೆ. ಜೊತೆಗೆ ಆ ಹಕ್ಕಿಗಳ ಶ್ವಾಶೋಚ್ವಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ ಎಂದು ಅಧಿಕಾರಿಗಳು ಹಕ್ಕಿಜ್ವರದ ಲಕ್ಷಣಗಳ ಬಗ್ಗೆ ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT