ಎಟಿಎಂಗೆ ಸ್ಪ್ರೇ ಹೊಡೆಯುತ್ತಿರುವ ಖದೀಮ. 
ರಾಜ್ಯ

ಬೆಂಗಳೂರು: ಕ್ಯಾಮರಾಗೆ ​ಸ್ಪ್ರೇ ಮಾಡಿ ATM ನಿಂದ ಲಕ್ಷಾಂತರ ರೂ ಹೊತ್ತೊಯ್ದ ಖದೀಮರು!

ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಬೆಂಗಳೂರು: ಗ್ಯಾಸ್ ಕಟರ್ ಮೂಲಕ ಎಟಿಎಂ ಯಂತ್ರ ಕಟ್ ಮಾಡಿರುವ ಖದೀಮರು, ಎಟಿಎಂನಲ್ಲಿದ್ದ ಲಕ್ಷಾಂತರ ರೂಪಾಯಿಗಳನ್ನು ಹೊತ್ತು ಪರಾರಿಯಾಗಿರುವ ಘಟನೆ ಹೊಸಕೋಟೆಯಲ್ಲಿ ಶನಿವಾರ ನಡೆದಿದೆ.

ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಆಂಧ್ರ ಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿರುವ ಖದೀಮರು, ಕಾರಿನಿಂದ ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷಿನನ್ನು ಕತ್ತರಿಸಿ ಅದರದಲ್ಲಿದ್ದ 10 ಲಕ್ಷ ರೂ.ಗೂ ಹೆಚ್ಚಿನ ಹಣವನ್ನು ದೋಚಿ, ಪರಾರಿಯಾಗಿದ್ದಾರೆ.

ತಮ್ಮ ಗುರುತು ಸಿಗಬಾರದೆಂಬ ಕಾರಣಕ್ಕೆ ಸಿಸಿ ಕ್ಯಾಮರಾಕ್ಕೆ ಕಪ್ಪು ಬಣ್ಣದ ಸ್ಪ್ರೇ ಹೊಡೆದಿದ್ದಾರೆ. ಘಟನೆಯ ಸಮಯದಲ್ಲಿ ಸ್ಥಳದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ.

ಘಟನೆಯ ವಿಡಿಯೋ ಪಕ್ಕದ ಕಟ್ಟಡದ ಮತ್ತೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿರುವುದು ಕಂಡು ಬಂದಿದ್ದು, ಕಾರಿನ ಸಂಖ್ಯೆ ಕೂಡ ಕಂಡು ಬಂದಿದೆ. ಆರೋಪಿಗಳು ಕದ್ದ ವಾಹನವನ್ನು ಬಳಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ವೃತ್ತಿಪರ ಗ್ಯಾಂಗ್ ನಂತೆ ಕಾಣುತ್ತಿದ್ದು, ಆರೋಪಿಗಳ ಬಂಧನಕಕೆ ಎರಡಕ್ಕೂ ಹೆಚ್ಚು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT