ವಿಧಾನ ಸೌಧ  
ರಾಜ್ಯ

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಮಾರ್ಚ್ 7ಕ್ಕೆ ಬಜೆಟ್ ಮಂಡನೆ

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬೆಂಗಳೂರು: ನಾಳೆ ಸೋಮವಾರದಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾ.21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು. ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದ್ದಾರೆ.

ರ್ಯಾಂಪ್ ವ್ಯವಸ್ಥೆ

ಈ ನಡುವೆ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ವಿಶೇಷ ರ್ಯಾಂಪ್‌ ಸಿದ್ದಗೊಳ್ಳುತ್ತಿದೆ. ಕಳೆದ ಅನೇಕ ದಿನಗಳಿಂದ ಮಂಡಿ ಚಿಪ್ಪು ನೋವಿನಿಂದ ಬಳಲುತ್ತಿದ್ದಾರೆ. ವೈದ್ಯರು ಆರು ವಾರಗಳ ವಿಶ್ರಾಂತಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ 16 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಅವರಿಗೆ ವಿಧಾನಸೌಧದಕ್ಕೆ ಆಗಮಿಸಲು ಅನುಕೂಲ ಆಗಲಿ ಎಂದು ರ್ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಸಿದ್ದರಾಮಯ್ಯನವರು ಈ ಬಾರಿ ಕುಳಿತುಕೊಂಡು ಬಜೆಟ್ ಪ್ರತಿ ಓದುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ