ರಂಜಾನ್  
ರಾಜ್ಯ

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಒಂದು ತಿಂಗಳು ಉಪವಾಸ ವ್ರತ

ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಧಾರ್ಮಿಕ ಮುಖಂಡರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಅಮವಾಸೆಯ ಹಿಂದಿನ ದಿನ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದು ಭಾನುವಾರದಿಂದ ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ.

ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆಚರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.

ಬೆಳಗಿನ ಜಾವವೇ ಊಟೋಪಚಾರವನ್ನು ಮುಗಿಸಿದ ಮುಸ್ಲಿಂ ಬಾಂಧವರು ಒಂದು ತಿಂಗಳ ಉಪವಾಸ ಕೈಗೊಳ್ಳಲಿದ್ದಾರೆ. ಇಂದು ಮುಂಜಾನೆಯೇ ಮಸೀದಿಗೆ ಹೋಗಿ ನಮಾಜ್ ಮಾಡಿಬಂದರು. ಕೆಲವರು ಮನೆಗಳಲ್ಲಿಯೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿದರು. ಕೆಲವು ದೇಶಗಳಲ್ಲಿ ನಿನ್ನೆ ರಂಜಾನ್ ಉಪವಾಸ ಶುರುವಾದರೆ, ಭಾರತದಲ್ಲಿ ಮಾತ್ರ ಒಂದು ದಿನ ತಡವಾಗಿ ಶುರುವಾಗಿದೆ. ಮಾರ್ಚ್ 2ರಿಂದ ಆರಂಭವಾಗಿ 31ರವರೆಗೆ ಇರಲಿದೆ ಎಂಬುದು ಮುಸ್ಲಿಂ ಧರ್ಮಗುರುಗಳ ವಿವರಣೆಯಾಗಿದೆ.

ಹೇಗಿರುತ್ತದೆ ರಂಜಾನ್ ಉಪವಾಸ

ರಂಜಾನ್ ಮಾಸದಲ್ಲಿ ಮುಸ್ಲಿಂ ಬಾಂಧವರು ಬೆಳಗ್ಗೆ 5.20ರೊಳಗೆ ಆಹಾರ ಸೇವನೆ ಮುಗಿಸಿ ನಂತರ ಧಾರ್ಮಿಕ ಪ್ರಾರ್ಥನೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಂತರ ಉಪವಾಸ ಆರಂಭವಾದರೆ ಸಂಜೆ 6.30ಕ್ಕೆ ಸೂರ್ಯಾಸ್ತ ನಂತರ ಮುಕ್ತಾಯವಾಗುತ್ತದೆ. ಸೂರ್ಯಾಸ್ತ ನಂತರ ಮತ್ತೆ ಧಾರ್ಮಿಕ ಪೂಜೆ ನಡೆಸಿ ಆಹಾರ ಸೇವನೆ ಇರುತ್ತದೆ. ಇಫ್ತಿಯಾರ್ ಕೂಟಗಳನ್ನು ರಾಜಕೀಯ ನಾಯಕರು, ಗಣ್ಯರು ಈ ತಿಂಗಳು ಆಯೋಜಿಸುತ್ತಿರುತ್ತಾರೆ. ರಾತ್ರಿ ವೇಳೆಯಲ್ಲಿಯೂ ಪ್ರಾರ್ಥನೆ ಸಲ್ಲಿಸುತ್ತಾರೆ. ಇದಕ್ಕೆ ಮುಸಲ್ಮಾನರು ರೋಜಾ ಎಂದು ಕರೆಯುತ್ತಾರೆ.

ರಂಜಾನ್‌ ಮಾಸದಲ್ಲಿ ಮುಸ್ಲಿಂ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಪಾಪಗಳಿಂದ ಮೋಕ್ಷ ಸಿಗುವುದು, ಅಲ್ಲಾನ ಕೃಪೆಗೆ ಪಾತ್ರರಾಗುತ್ತೇವೆ ಎಂಬ ನಂಬಿಕೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT