ಲಕ್ಷ್ಮಿ ಹೆಬ್ಬಾಳ್ಕರ್, ಸಿ.ಟಿ.ರವಿ 
ರಾಜ್ಯ

ಸಿ.ಟಿ ರವಿ-ಹೆಬ್ಬಾಳ್ಕರ್ ಪ್ರಕರಣ 'ಎಥಿಕ್ಸ್ ಕಮಿಟಿ'ಗೆ ಹಸ್ತಾಂತರ..!

ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ.

ಬೆಂಗಳೂರು: ಸಿ.ಟಿ.ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಪ್ರಕರಣವನ್ನು ವಿಧಾನ ಪರಿಷತ್‌ನ ಎಥಿಕ್ಸ್ ಕಮಿಟಿಗೆ ಹಸ್ತಾಂತರಿಸಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಅವರು ಶನಿವಾರ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಈಗಾಗಲೇ ಅಂತ್ಯ ಆಗಿದೆ. ಬೆಳಗಾವಿಯಲ್ಲೇ ನಾನು ಅದಕ್ಕೆ ರೂಲಿಂಗ್ ಕೊಟ್ಟಿದ್ದೆ. ಆದರೆ, ಇಬ್ಬರೂ ಮತ್ತೆ ದೂರು ಕೊಟ್ಟಿದ್ದಾರೆ. ಇದರ ಮಧ್ಯೆ ಇಬ್ಬರಿಗೂ ಸಂಧಾನ ಮಾಡೋ ಕೆಲಸಕ್ಕೆ ಮುಂದಾಗಿದ್ದೆ. ಆದರೆ, ಇದಕ್ಕೆ ಯಾರು ಒಪ್ಪಿಲ್ಲ. ಹೀಗಾಗಿ ಪ್ರಕರಣವನ್ನ ಎಥಿಕ್ಸ್ ಕಮಿಟಿಗೆ ನೀಡಿದ್ದೇನೆಂದು ಹೇಳಿದರು.

ಎಥಿಕ್ಸ್ ಕಮಿಟಿ ವರದಿ ಕೊಟ್ಟ ಮೇಲೆ ಮುಂದಿನ ತೀರ್ಮಾನ ಮಾಡುತ್ತೇನೆ. ಒಂದು ತಿಂಗಳಲ್ಲಿ ವರದಿ ಕೊಡಲು ಹೇಳಿದ್ದೇನೆ. ಈ ವಿಷಯ ಸದನದಲ್ಲಿ ಚರ್ಚೆ ಆಗುವುದಿಲ್ಲ. ಎಥಿಕ್ಸ್ ಕಮಿಟಿಯಲ್ಲಿ ಸಿ.ಟಿ ರವಿ ‌ಇದ್ದರೂ, ಈಗ ಅವರದ್ದೇ ಕೇಸ್ ಬಂದಿರುವುದರಿಂದ ಅವರನ್ನು ಎಥಿಕ್ಸ್ ಕಮಿಟಿಯಿಂದ ಕೈ ಬಿಡಲಾಗಿದೆ ಎಂದು ತಿಳಿಸಿದರು.

ಸದನದಲ್ಲಿ ಮುಗಿದದ್ದನ್ನ ಅಲ್ಲೇ ಮುಗಿಸಬೇಕಿತ್ತು. ಸದನ ನಡೆದಾಗ ನಡೆದಿದ್ದರೆ ಹೀಗೆ ಆಗುತ್ತಿರಲಿಲ್ಲ. ಸದನ ನಡಯದೇ ಇದ್ದಾಗ ಇದು ನಡೆದಿರೋದಕ್ಕೆ ಇಷ್ಟು ದೊಡ್ಡದು ಆಗಿದೆ. ಹೀಗಾಗಿ ಎಥಿಕ್ಸ್ ಕಮಿಟಿಗೆ ಕೊಡಲಾಗಿದೆ. ಎಥಿಕ್ಸ್ ಕಮಿಟಿ ವರದಿ ಕೊಡಲಿ ನೋಡೋಣ. ಎಥಿಕ್ಸ್ ಕಮಿಟಿಯಲ್ಲಿಯೇ ಶೇ,99ರಷ್ಟು ಸಮಸ್ಯೆ ಪರಿಹಾರ ಆಗುವ ವಿಶ್ವಾಸ ಇದೆ. ಇಲ್ಲದೇ ಹೋದರೆ ಎಥಿಕ್ಸ್ ಕಮಿಟಿ ವರದಿಯನ್ನು ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT