ಕೇಂದ್ರ ಸಚಿವ ಸುರೇಶ್ ಗೋಪಿ  
ರಾಜ್ಯ

ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸಬಾರದು: ಕೇಂದ್ರ ಸಚಿವ ಸುರೇಶ್ ಗೋಪಿ

ನಿನ್ನೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಸಿನಿಮಾವನ್ನು ನೋಡುವುದು ಮಾತ್ರವಲ್ಲ, ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಮೈಸೂರು: ಸಮಾಜದಲ್ಲಿ ನಡೆಯುವ ಹಿಂಸಾಚಾರದ ಘಟನೆಗಳನ್ನು ಆಧರಿಸಿ ಸಿನಿಮಾ ತಯಾರಾಗಬಹುದು, ಆದರೆ ಹಿಂಸಾಚಾರಗಳು ಸಿನಿಮಾದಿಂದಲೇ ಹುಟ್ಟಿಕೊಳ್ಳುತ್ತವೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನಿನ್ನೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಸಿನಿಮಾವನ್ನು ನೋಡುವುದು ಮಾತ್ರವಲ್ಲ, ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

'ಇಡುಕ್ಕಿ ಗೋಲ್ಡ್' ಚಿತ್ರವನ್ನು ಅದರ ವಿಷಯದ ಕಾರಣದಿಂದಾಗಿ ಜನ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಇರುವ ಪರಿಸ್ಥಿತಿಯನ್ನೇ ಚಿತ್ರದಲ್ಲಿ ತೋರಿಸಲಾಗಿದೆ. ಅದನ್ನು ವೈಭವೀಕರಿಸುವುದರ ಹಿಂದೆ ಯಾವ ಕಾರಣವಿದೆ ಎಂದು ನೀವು (ಸಿನೆಮಾದ ಹಿಂದಿನ) ಕಲಾವಿದರನ್ನು ಕೇಳಬೇಕು ಎಂದರು.

ಹಾಗಾದರೆ ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸುವುದನ್ನು ಕಡಿಮೆ ಮಾಡಬೇಕೇ ಎಂಬುದರ ಕುರಿತು ಗೋಪಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಆದಾಗ್ಯೂ, ಸಿನಿಮಾಗಳಲ್ಲಿ ಹಿಂಸೆಯನ್ನು ವೈಭವೀಕರಿಸಬಾರದು ಎಂಬುದರ ಒಪ್ಪಿಕೊಂಡರು. ಪರದೆಯ ಮೇಲೆ ಚಿತ್ರಿಸಲಾಗುತ್ತಿರುವುದು ಕೇವಲ ಮನರಂಜನೆಗಾಗಿ ಅಲ್ಲ. ನಿಜ ಜೀವನದಲ್ಲಿ ಇಂತಹ ಕೃತ್ಯಗಳು ಸರಿಯಲ್ಲ ಎಂದು ಜನರು ಅರಿತುಕೊಳ್ಳಬೇಕು ಎಂದರು.

ಸಮಾಜದಲ್ಲಿ ಮಾದಕ ವಸ್ತುಗಳ ಹರಿವನ್ನು ತಡೆಯುವ ಜವಾಬ್ದಾರಿಯನ್ನು ರಾಜಕೀಯ ಪಕ್ಷಗಳು ಮತ್ತು ಸ್ಥಳೀಯ ನಾಯಕರು ತೆಗೆದುಕೊಳ್ಳಬೇಕು. ಸ್ಥಳೀಯ ನಿವಾಸಿ ಸಂಘಗಳು ಮತ್ತು ಪಕ್ಷಗಳ ಬೂತ್ ಮಟ್ಟದ ನಾಯಕರು ಸಹ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT