ಸತೀಶ್ ಜಾರಕಿಹೊಳಿ ಮತ್ತು ಮಂಜುಳಾ  
ರಾಜ್ಯ

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.

ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ.

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

ತನಿಖೆ ವೇಳೆ ಕಿಡ್ನ್ಯಾಪ್‌ನ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ಕಿಂಗ್‌ಪಿನ್ ಮಂಜುಳಾ ಎಂಬ ವಿಚಾರ ತಿಳಿದಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ.

ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48ವರ್ಷ) ಅವರು ಫೆಬ್ರವರಿ 14ರಂದು ರಾತ್ರಿ 11ಗಂಟೆ ಸುಮಾರಿಗೆ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು. ಮರುದಿನ ಫೆಬ್ರವರಿ 15 ರಂದು ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ನಿನ್ನ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.

ಮಗ ಮತ್ತು ಸ್ನೇಹಿತರು, ಮಂಜುಳಾ ನೀಡಿದ ಪ್ಲ್ಯಾನ್‌ ಮೇಲೆ ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನ ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT