ಸತೀಶ್ ಜಾರಕಿಹೊಳಿ ಮತ್ತು ಮಂಜುಳಾ  
ರಾಜ್ಯ

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ; ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಬಂಧನ

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.

ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ ಠಾಣೆ ಪೊಲೀಸರು ಕೇವಲ 24ಗಂಟೆಯಲ್ಲಿ ಪ್ರಕರಣವನ್ನು ಭೇದಿಸಿದ್ದು, ಅಪಹರಣವಾಗಿದ್ದ ಉದ್ಯಮಿಯನ್ನು ರಕ್ಷಿಸಿದ್ದಾರೆ.

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು.

ತನಿಖೆ ವೇಳೆ ಕಿಡ್ನ್ಯಾಪ್‌ನ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ಕಿಂಗ್‌ಪಿನ್ ಮಂಜುಳಾ ಎಂಬ ವಿಚಾರ ತಿಳಿದಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ.

ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48ವರ್ಷ) ಅವರು ಫೆಬ್ರವರಿ 14ರಂದು ರಾತ್ರಿ 11ಗಂಟೆ ಸುಮಾರಿಗೆ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು. ಮರುದಿನ ಫೆಬ್ರವರಿ 15 ರಂದು ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ನಿನ್ನ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.

ಮಗ ಮತ್ತು ಸ್ನೇಹಿತರು, ಮಂಜುಳಾ ನೀಡಿದ ಪ್ಲ್ಯಾನ್‌ ಮೇಲೆ ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನ ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT