ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾರಿನಲ್ಲಿ ಉದ್ಯಮಿಯ ಶವ ಪತ್ತೆ; ಸಾವಿನ ಸುತ್ತ ಅನುಮಾನಗಳ ಹುತ್ತ

ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಬಂದಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

ಬೆಂಗಳೂರು: ಉದ್ಯಮಿಯೊಬ್ಬರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಿಗೇಹಳ್ಳಿ ಫ್ಲೈಓವರ್ ಬಳಿ ನಡೆದಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಮೂಡತೊಡಗಿವೆ.

ಮೃತ ವ್ಯಕ್ತಿಯನ್ನು ಮುತ್ಯಾಲ ನಗರದ ನಿವಾಸಿ ಅಶ್ವಿನ್ ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮನೆಯಿಂದ ಕಾರಿನಲ್ಲಿ ಹೊರಟಿದ್ದ ಅಶ್ವಿನ್ ಕುಮಾರ್ ತಡರಾತ್ರಿಯಾದರೂ ಮನೆಗೆ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ಅವರ ಮೊಬೈಲ್‍ಗೆ ಕರೆ ಮಾಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಡಿಗೇಹಳ್ಳಿ ಠಾಣೆ ಪೊಲೀಸರು ಮೊಬೈಲ್ ನಂಬರ್ ಪಡೆದು ಕಾರ್ಯಾಚರಣೆ ಕೈಗೊಂಡಾಗ ಅಶ್ವಿನ್ ಕುಮಾರ್ ಅವರು ತಿಂಡ್ಲು ಮುಖ್ಯ ರಸ್ತೆಯ ಮೇಲೇತುವೆ ಬಳಿ ಇರುವುದು ಗೊತ್ತಾಗಿ ರಾತ್ರಿ ಸುಮಾರು 11.30ರಲ್ಲಿ ಅಲ್ಲಿಗೆ ಹೋಗಿದ್ದಾರೆ.

ಮಲಗಿದ್ದ ಸ್ಥಿತಿಯಲ್ಲಿದ್ದ ಅಶ್ವಿನ್ ಕುಮಾರ್ ಅವರನ್ನು ಕಾರಿನ ಗಾಜು ತಟ್ಟಿ ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಸ್ಪಂದನೆ ಬಂದಿಲ್ಲ. ನಂತರ ಗಾಜು ಒಡೆದು ಪರಿಶೀಲಿಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

ಸಾವಿನ ಕುರಿತಂತೆ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಉಸಿರುಗಟ್ಟಿ ಸಾವನ್ನಪ್ಪಿರಬಹುದು ಅಥವಾ ಹೃದಯಾಘಾತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೊಡಿಗೇಹಳ್ಳಿ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT