ಸಚಿವ ಮಧು ಬಂಗಾರಪ್ಪ 
ರಾಜ್ಯ

ಭಾಷಾ ನೀತಿ ಕುರಿತು ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ: ಸಚಿವ ಮಧು ಬಂಗಾರಪ್

ಭಾಷಾ ನೀತಿ ಕುರಿತಂತೆ ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ ಕೈಗೊಳ್ಳುತ್ತೇವೆ. ಬೇರೆ ಭಾಷೆಗೆ ಅಗೌರವ ಕೊಡುವುದಲ್ಲ. ಎಲ್ಲ ಭಾಷೆಯನ್ನು ಕಲಿಯಬೇಕು. ಆದರೆ ಕನ್ನಡವನ್ನು ಕಡ್ಡಾಯ ಮಾಡಲೇಬೇಕು.

ಶಿವಮೊಗ್ಗ: ಭಾಷಾ ನೀತಿ ಕುರಿತು ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಷಾ ನೀತಿ ಕುರಿತಂತೆ ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ ಕೈಗೊಳ್ಳುತ್ತೇವೆ. ಬೇರೆ ಭಾಷೆಗೆ ಅಗೌರವ ಕೊಡುವುದಲ್ಲ. ಎಲ್ಲ ಭಾಷೆಯನ್ನು ಕಲಿಯಬೇಕು. ಆದರೆ ಕನ್ನಡವನ್ನು ಕಡ್ಡಾಯ ಮಾಡಲೇಬೇಕು ಎಂದು ಹೇಳಿದರು.

ಬೇರೆ ರಾಜ್ಯದ ಮಕ್ಕಳು ಎಂಟನೇ ತರಗತಿಗೆ ವರ್ಗಾವಣೆ ಆಗಿ ಇಲ್ಲಿಗೆ ಬರುತ್ತಾರೆ. ಅವರ ಜೀವನದಲ್ಲೇ ಕನ್ನಡ ಕಲಿತಿರುವುದಿಲ್ಲ. ಅವರಿಗೆ ಒಂದೇ ಬಾರಿ ಕನ್ನಡ ಕಲಿಯಿರಿ ಎಂದರೆ ಆಗುವುದಿಲ್ಲ. ಅವರಿಗೆ ಕನ್ನಡ ಕಲಿಸಬೇಕು. ಇದು ಸೂಕ್ಷ್ಮ ವಿಚಾರ. ಪಾಲಿಸಿ ಮಾಡುವಾಗ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಮಾಡುತ್ತೇವೆ. ಎಸ್‌ಇಪಿ ಬರುವುದರಿಂದ ನೋಡಿಕೊಂಡು ಮಾಡುತ್ತೇವೆ ಎಂದು ತಿಳಿಸಿದರು,

ಎನ್​ಇ‌ಪಿ ಹಾಗೂ ಎಸ್​ಇಪಿ ಬಗ್ಗೆ ಗೂಂದಲವಿದೆ. ನಾವು ಎಸ್​ಇಪಿ ಅಂತ ಕೇಳುತ್ತಿದ್ದೇವೆ. ಈಗ ಮೊದಲಿನಂತೆ ಕಲಿಕೆ ಇರಲಿದೆ. ಬೇರೆ ಭಾಷೆ ಹೇರಿಕೆಯ ಕುರಿತು ನಾವು ಹುಷಾರಾಗಿರಬೇಕಾಗುತ್ತದೆ. ಕನ್ನಡವನ್ನು ಬಡವಾಗಲು ಈಗ ಅಲ್ಲ ಮುಂದೂ ಸಹ ಬಿಡುವುದಿಲ್ಲ. ಇದೆಲ್ಲಾ ತಾಂತ್ರಿಕವಾಗಿ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT