ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಶ್ರೀರಾಮಸೇನೆ ಸದಸ್ಯರು. 
ರಾಜ್ಯ

ಶಿವಮೊಗ್ಗ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ತಡೆ: ಶ್ರೀರಾಮ ಸೇನೆ ತೀವ್ರ ಖಂಡನೆ

ಬೆಳಗಾವಿ ಪೊಲೀಸರ ಈ ಕ್ರಮವನ್ನು ಖಂಡಿಸಿ ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ತಡೆದ ಪೊಲೀಸರ ಕ್ರಮವನ್ನು ಶ್ರೀರಾಮಸೇನೆ ತೀವ್ರವಾಗಿ ಖಂಡಿಸಿದೆ.

ಬೆಳಗಾವಿ ಪೊಲೀಸರ ಈ ಕ್ರಮವನ್ನು ಖಂಡಿಸಿ ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಈ ಕ್ರಮ ಸಾಂವಿಧಾನಿಕ ಹಕ್ಕುಗಳು, ಪ್ರಜಾಪ್ರಭುತ್ವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ ಎಂದು ಟೀಕಿಸಿದರು.

ಸಂಘಟನೆಯ ಸದಸ್ಯ ರವಿಕುಮಾರ್ ಕೋಕಿಟ್ಕರ್ ಅವರು ಮಾತನಾಡಿ, ರಾಷ್ಟ್ರೀಯವಾದಿ ಮತ್ತು ಧಾರ್ಮಿಕ ನಾಯಕ ಮುತಾಲಿಕ್ ಅವರು ತಮ್ಮ ಜೀವನದ 50 ವರ್ಷಗಳಿಗೂ ಹೆಚ್ಚು ಕಾಲ ರಾಷ್ಟ್ರ ಮತ್ತು ಹಿಂದೂ ಧರ್ಮದ ಸೇವೆಗೆ ಮೀಸಲಿಟ್ಟಿದ್ದಾರೆ. ಸರಿಯಾದ ಕಾರಣಗಳಿಲ್ಲದೆ ಅವರ ಮೇಲೆ ನಿರಂತರವಾಗಿ ಜಿಲ್ಲಾ ಪ್ರವೇಶ ನಿಷೇಧ ಹೇರಿರುವುದು ಸರಿಯಲ್ಲ. ಈ ಮೂಲಕ ಮುತಾಲಿಕ್ ಅವರಿಗೆ ಪ್ರಜಾಪ್ರಭುತ್ವ ವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಶಾಂತಿ ಕಾಪಾಡಲು ಬದಲವಾದ ಕ್ರಮ ಕೈಗೊಳ್ಳುವ ಬದಲು, ಸರ್ಕಾರ ಹಳೆ ಪ್ರಕರಣನ್ನು ಕೆದಕಿ ಹಿಂದೂ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

username feature: ವಾಟ್ಸಾಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್ ಗೆ ಕೇಂದ್ರದ ನೋಟಿಸ್!

ಬಂಡಾಯ ಬಣದಿಂದ ECI ಮುಂದೆ ಪಕ್ಷದ ಮೇಲೆ ಹಕ್ಕು ಮಂಡನೆ: ತೀವ್ರಗೊಂಡ ಟಿಎಂಸಿ ಆಂತರಿಕ ಕಲಹ

ಪಾಕ್ ಸೇನೆ ಕಾಶ್ಮೀರಿಗಳಿಗೆ ಕೈಗೆ ಬಂದೂಕು ನೀಡಿ, ಈಗ ಅವರನ್ನು ಉಗ್ರರು ಎಂದು ಕರೆಯುತ್ತಿದೆ: POK ನಾಯಕ

ಮಂಡ್ಯ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಂದ ಪತಿ!