ಸಿಎಂ ಸಿದ್ದರಾಮಯ್ಯ 
ರಾಜ್ಯ

ಹಣದ ಲಭ್ಯತೆ ಆಧರಿಸಿ ಗುತ್ತಿಗೆದಾರರ ಬಿಲ್‌ ಪಾವತಿ: ಸಿಎಂ ಸಿದ್ದರಾಮಯ್ಯ

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಹಣದ ಲಭ್ಯತೆಯ ಆಧಾರದ ಮೇಲೆ ಗುತ್ತಿಗದಾರರ ಬಿಲ್‌ಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆದಾರರಿಗೆ ಸೋಮವಾರ ಭರವಸೆ ನೀಡಿದರು.

ಬಾಕಿ ಬಿಲ್ ಪಾವತಿ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕಾಗಿ ವಿಧಾನಸೌಧದಲ್ಲಿ ತಮ್ಮನ್ನು ಸೋಮವಾರ ಭೇಟಿಯಾದ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ, ಹಂತ ಹಂತವಾಗಿ ಬಾಕಿ ಬಿಲ್ ಪಾವತಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಸುದೀರ್ಘ ಮಾತುಕತೆ ನಡೆಸಿದ್ದೇನೆ. ಬಾಕಿಯಿರುವ ಬಿಲ್ ಪಾವತಿಗೆ ಮನವಿ ಮಾಡಿದ್ದಾರೆ. ಸರ್ಕಾರದಲ್ಲಿ ಲಭ್ಯವಿರುವ ಹಣಕಾಸನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು. ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ?ಯಾರೇ ಆಗಿರಲಿ ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು ಎಂದು ತಿಳಿಸಿದರು.

ನಾನು ಇದುವರೆಗೂ ಬಿಲ್ ಬಿಡುಗಡೆ ಮಾಡಲು ಯಾರಿಂದಲೂ ನಯಾಪೈಸೆ ದುಡ್ಡು ಪಡೆದಿಲ್ಲ. ಹಿಂದಿನ ಬಿಜೆಪಿ ಸರ್ಕಾರದವರು ಬಜೆಟ್‌ ನಲ್ಲಿ ಅನುದಾದ ಇಡದೆ ಬೇಕಾಬಿಟ್ಟಿ ಟೆಂಡರ್‌ ಕರೆದು, ಕೆಲಸ ಆರಂಭಿಸಿ, ಗುತ್ತಿಗೆದಾರರಿಗೆ ಬಿಲ್‌ ಹಣ ನೀಡದೆ ಸುಮಾರು ರೂ.30,000 ಕೋಟಿ ಬಾಕಿ ಮೊತ್ತವನ್ನು ನಮ್ಮ ಸರ್ಕಾರದ ತಲೆಯ ಮೇಲೆ ಹೊರಿಸಿ ಹೋಗಿದ್ದಾರೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಆರಂಭದಲ್ಲಿ ರಾಜ್ಯಪಾಲರು ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಇದರ ನಂತರ ಉತ್ತರ ನೀಡುತ್ತೇನೆ.ಬಜೆಟ್ ಮಂಡನೆ ನಂತರ, ಮಾರ್ಚ್ 19 ರವರೆಗೆ ಬಜೆಟ್ ಕುರಿತು ಚರ್ಚೆ ನಡೆಯಲಿದ್ದು, ಮಾರ್ಚ್ 20 ರಂದು ಉತ್ತರಿಸುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT