ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿಯಲ್ಲಿ ಹಕ್ಕಿ ಜ್ವರ ಭೀತಿ: ಒಂದೇ ಫಾರಂನಲ್ಲಿ 10,000 ಕೋಳಿಗಳ ಸಾವು

ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

ಬಳ್ಳಾರಿ: H5N1 ವೈರಸ್ ಪರಿಣಾಮ ಬಳ್ಳಾರಿ ಜಿಲ್ಲೆಯ ಕೋಳಿ ಸಾಕಣೆ ಕೇಂದ್ರಗಳಲ್ಲಿ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕುರಿತ ಆತಂಕ ಹೆಚ್ಚಾಗುವಂತೆ ಮಾಡಿದೆ.

ಕುರೇಕೊಪ್ಪ ಗ್ರಾಮದ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 2,400 ಕೋಳಿಗಳು ಸಾವನ್ನಪ್ಪಿವೆ. ಇದರ ಮಾದರಿಗಳನ್ನು ಮಧ್ಯಪ್ರದೇಶ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿಯಲ್ಲಿ H5N1 ಇರುವಿಕೆ ದೃಢಪಟ್ಟಿತ್ತು.

ಬಳಿಕ ಫೆಬ್ರವರಿ 26 ರಂದು, ಕಪ್ಪಗಲ್ಲು ಕೋಳಿ ಸಾಕಣೆ ಕೇಂದ್ರದಲ್ಲಿ 8,000 ಕೋಳಿಗಳು ಒಮ್ಮೆಲೆ ಸಾವನ್ನಪ್ಪಿವೆ, ಕೋಳಿಗಳು ಹಕ್ಕಿ ಜ್ವರದಿಂದಲೇ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಬಳ್ಳಾರಿ ಉಪ ಆಯುಕ್ತ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದ್ದಾರೆ.

ಪ್ರಸ್ತುತದ ಪರಿಸ್ಥಿತಿಯಲ್ಲಿ ಕೋಳಿಗಳನ್ನು ನಿರ್ವಹಿಸುವ ಕುರಿತು ಕೋಳಿ ಸಾಕಾಣೆಗಾರರಿಗೆ ತರಬೇತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಆಂಧ್ರಪ್ರದೇಶ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಪಶು ಸಂಗೋಪನಾ ಇಲಾಖೆಯು 10 ತಂಡಗಳನ್ನು ರಚಿಸಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್‌ಪೋಸ್ಟ್‌ಗಳಲ್ಲೂ ಪರಿಶೀಲನೆ ನಡೆದಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಜನರು ಆತಂಕ ಪಡುವ ಪರಿಸ್ಥಿತಿ ಇಲ್ಲ. ಕೋಳಿ ಮಾಂಸ, ಮೊಟ್ಟೆ ಸೇವನೆ ವೇಳೆ ಚೆನ್ನಾಗಿ ಬೇಯಿಸಿ ಸೇವಿಸಬೇಕು. ಮಾಂಸ ಸೇವಿಸುವ ಮೊದಲು ಅರ್ಧ ಗಂಟೆಗಿಂತ ಹೆಚ್ಚು ಕಾಲ ಕನಿಷ್ಠ 70 ಡಿಗ್ರಿ ಸೆಲ್ಸಿಯಸ್‌ನಲ್ಲಿ ಬೇಯಿಸಬೇಕೆಂದು ಸಲಹೆ ನೀಡಿದರು.

ಕಪ್ಪಗಲ್ಲು ಫಾರ್ಮ್ ಸುತ್ತಲಿನ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದೆ, ಜನರು ಭಯ ಪಡುವ ಬದಲು, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT