ನಿಶಾಂತ್, ಚಂದನ 
ರಾಜ್ಯ

ಬಂಡೀಪುರ: ರೆಸಾರ್ಟ್ ನಲ್ಲಿ ತಂಗಿದ್ದ ದಂಪತಿ, ಮಗು ಅಪಹರಣ!

ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.

ಮೈಸೂರು: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಸೋಮವಾರ ನಡೆದಿದೆ.

ನಿಶಾಂತ್ ಮತ್ತು ಚಂದನ ದಂಪತಿಗಳು ತಮ್ಮ ಮಗುವಿನೊಂದಿಗೆ ಭಾನುವಾರ ರಾತ್ರಿ ಬಂಡೀಪುರ ಸಮೀಪದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ದಂಪತಿ ಹಾಗೂ ಮಗು ರೆಸಾರ್ಟ್ ನಿಂದ ಹೊರ ಬಂದ ವೇಳೆ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಮೂವರನ್ನು ಅಪಹರಿಸಿದ್ದಾರೆಂದು ತಿಳಿದುಬಂದಿದೆ.

ಬಳಿಕ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಡಿವೈಎಸ್‌ಪಿ ಲಕ್ಷ್ಮಯ್ಯ ನೇತೃತ್ವದ ಪೊಲೀಸ್ ತಂಡ ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿತು. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರೀಶೀಲನೆ ನಡೆಸಿತು.

ಘಟನೆಯ ಕುರಿತು ಮಾತನಾಡಿದ ಎಸ್‌ಪಿ ಬಿ.ಟಿ. ಕವಿತಾ, ಸೋಮವಾರ ಮಧ್ಯಾಹ್ನ 1 ಗಂಟೆಗೆ ಘಟನೆಗೆ ಈ ಬಗ್ಗೆ ರೆಸಾರ್ಟ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಪತಿ, ಪತ್ನಿ ಮತ್ತು ಮಗುವನ್ನು ಕರೆದುಕೊಂಡು ಹೋಗಿದ್ದಾರೆಂದು ಹೇಳಿದರು. ಸಂಬಂಧಿಕರು ಅವರನ್ನು ಕರೆದುಕೊಂಡು ಹೋಗಿದ್ದಾರೋ ಅಥವಾ ಬೇರೆ ಯಾರಾದರೂ ಕರೆದುಕೊಂಡು ಹೋಗಿದ್ದಾರೋ ಎಂಬುದು ತಿಳಿದಿಲ್ಲ. ಅವರನ್ನು ಯಾರು ಕರೆದುಕೊಂಡು ಹೋದರು ಎಂಬುದರ ಬಗ್ಗೆ ರೆಸಾರ್ಟ್‌ಗೂ ಯಾವುದೇ ಮಾಹಿತಿ ಇಲ್ಲ. ಅದು ಅಪಹರಣವಾಗಿದ್ದರೆ, ಪ್ರತಿರೋಧ ಎದುರಾಗುತ್ತಿತ್ತು. ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ