ವಿಧಾನಸಭೆ 
ರಾಜ್ಯ

ವಿಧಾನಸಭೆಯಲ್ಲಿ ನಟ್ಟು ಬೋಲ್ಟ್ ಸದ್ದು; ನಮ್ಮನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಬಿಜೆಪಿ ಗಲಾಟೆ!

ವಿರೋಧ ಪಕ್ಷದ ಶಾಸಕರು ಮಾತನಾಡುವಾಗಲೆಲ್ಲಾ ಕ್ಯಾಮೆರಾಗಳು ಸ್ಪೀಕರ್ ಮೇಲೆ ಕೇಂದ್ರೀಕರಿಸುತ್ತಿವೆ. ಆದರೆ ಆಡಳಿತ ಪಕ್ಷದ ಶಾಸಕರು ಅಥವಾ ಸಚಿವರು ಮಾತನಾಡುವಾಗ ಹೀಗೆ ಆಗುವುದಿಲ್ಲ ಎಂದು ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರು: ವಿಧಾನಸಭೆ ಕಲಾಪದಲ್ಲೂ ನಟ್ಟು ಬೋಲ್ಟ್ ಸದ್ದು ಮಾಡಿದ್ದು, ಪ್ರತಿಪಕ್ಷಗಳ ಸದಸ್ಯರು ಮಾತನಾಡುವಾಗ ನಮ್ಮನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಆರೋಪಿಸಿ ಮಂಗಳವಾರ ಬಿಜೆಪಿ ಕೋಲಾಹಲ ಸೃಷ್ಟಿಸಿತು.

ಕಲಾಪ ವರದಿಯ ಸಮಯದಲ್ಲಿ, ವಿರೋಧ ಪಕ್ಷದ ಶಾಸಕರು ಮಾತನಾಡುವಾಗಲೆಲ್ಲಾ ಕ್ಯಾಮೆರಾಗಳು ಸ್ಪೀಕರ್ ಮೇಲೆ ಕೇಂದ್ರೀಕರಿಸುತ್ತಿವೆ. ಆದರೆ ಆಡಳಿತ ಪಕ್ಷದ ಶಾಸಕರು ಅಥವಾ ಸಚಿವರು ಮಾತನಾಡುವಾಗ ಹೀಗೆ ಆಗುವುದಿಲ್ಲ ಎಂದು ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಆಕ್ಷೇಪ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಚರ್ಚೆಗೆ ಒತ್ತಾಯಿಸಿದಾಗ, ಅರವಿಂದ್ ಬೆಲ್ಲದ್ ಅವರು, ಅಶೋಕ್ ಅವರನ್ನು ಟಿವಿಯಲ್ಲಿ ತೋರಿಸುತ್ತಿಲ್ಲ ಎಂದು ಸ್ಪೀಕರ್‌ಗೆ ತಿಳಿಸಿದರು.

ವಿರೋಧ ಪಕ್ಷದ ಸದಸ್ಯರನ್ನು ತೋರಿಸದಂತೆ ಸೂಚನೆ ನೀಡಲಾಗಿದೆಯೇ? ಎಂದು ಪ್ರಶ್ನಿಸಿದ ಬೆಲ್ಲದ್, "ಇಡೀ ಸದನವನ್ನು ತೋರಿಸಲಾಗಿದೆ, ಆಡಳಿತ ಪಕ್ಷ ಮತ್ತು ಮಂತ್ರಿಗಳನ್ನು ತೋರಿಸಲಾಗಿದೆ, ಅಧ್ಯಕ್ಷರು ಮತ್ತು ಸ್ಪೀಕರ್ ಅವರನ್ನು ಸಹ ತೋರಿಸಲಾಗಿದೆ. ಆದರೆ ವಿರೋಧ ಪಕ್ಷದ ನಾಯಕ ಮಾತನಾಡುವಾಗ ಅವರನ್ನು ತೋರಿಸುತ್ತಿಲ್ಲ ಎಂದರು.

ಈ ವೇಳೆ ಬೆಲ್ಲದ್ ಅವರಿಗೆ ಸಾಥ್ ನೀಡಿದ ಆರ್ ಅಶೋಕ್, ನಾವು ಮಾತನಾಡುವಾಗ ಟಿವಿಯಲ್ಲಿ ನಮ್ಮನ್ನು ತೋರಿಸೋದೆ ಇಲ್ಲ. ಪ್ರತಿಭಟನೆ ಮಾಡುವಾಗಲೂ ನಮ್ಮನ್ನು ತೋರಿಸಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಯು.ಟಿ ಖಾದರ್ ಅವರು, ಯಾರೂ ನಿಮ್ಮನ್ನು ತೋರಿಸಬಾರದು ಎಂದು ಸೂಚಿಸಿಲ್ಲ. ‌ತಾಂತ್ರಿಕ ಸಮಸ್ಯೆ ಇರಬಹುದು. ಅದನ್ನು ಸರಿಪಡಿಸಲಾಗುವುದು ಎಂದರು. ಅಲ್ಲದೆ, ಕಾರ್ಯದರ್ಶಿಯನ್ಮು ಕರೆದು ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ಎಚ್ ಕೆ ಪಾಟೀಲ್ ಮಾತನಾಡುವಾಗ ಟಿವಿಯಲ್ಲಿ ತೋರಿಸಲಾಗ್ತಿದೆ. ಆದರೆ ವಿರೋಧ ಪಕ್ಷದ ಸದಸ್ಯರು ಮಾತನಾಡುವ ತೋರಿಸುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ಮೊದಲು ಬೋಲ್ಟ್ ನೆಟ್ಟು ಸರಿ ಮಾಡಿ ಎಂದು ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಟಾಂಗ್ ಕೊಟ್ಟರು.

ಕೆಲವು ಸದಸ್ಯರು ಘೋಷಣೆ ಕೂಗಿ ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿ ಸದಸ್ಯರ ಆರೋಪವನ್ನು ನಿರಾಕರಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್ "ನಮ್ಮ ಅಧ್ಯಕ್ಷರು ಇಂತಹ ಸೂಚನೆ ಕೊಡಲು ಸಾಧ್ಯವಿಲ್ಲ. ಅದನ್ನು ಸರಿ ಮಾಡಿ ಎಂದು ಸೂಚನೆ ಕೊಡುತ್ತೇವೆ" ಎಂದರು.

ಇದು ತಾಂತ್ರಿಕ ಸಮಸ್ಯೆ ಅಲ್ಲ, ಬದಲಾಗಿ ಸೂಚನೆ ಕೊಟ್ಟ ಕಾರಣದಿಂದ ಹೀಗಾಗಿದೆ ಎಂದು ಆರ್ ಅಶೋಕ್ ಕಿಡಿಕಾರಿದರು.

ವಿಪಕ್ಷ ಸದಸ್ಯರನ್ನು ತೋರಿಸುವುದರ ಮೇಲೆ ಉದ್ದೇಶಪೂರ್ವಕವಾಗಿ ನಿಷೇಧವಿದೆಯೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು.

ಈ ಹಂತದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಮಧ್ಯಪ್ರವೇಶಿಸಿ, ವಿರೋಧ ಪಕ್ಷದ ಭಾಷಣಕಾರರನ್ನು ತೋರಿಸದಿರುವ ಅಭ್ಯಾಸವನ್ನು ಮೊದಲು ಬಿಜೆಪಿ ಆಳ್ವಿಕೆಯಲ್ಲಿ ಸಂಸತ್ತಿನಲ್ಲಿ ಪರಿಚಯಿಸಲಾಯಿತು ಮತ್ತು ನಂತರ ಮಾಜಿ ಸ್ಪೀಕರ್ ಕಾಗೇರಿ ಅವರು ಬಿಜೆಪಿ ಅಧಿಕಾರಾವಧಿಯಲ್ಲಿ ವಿಧಾನಸಭೆಯಲ್ಲಿ ಅದನ್ನು ಜಾರಿಗೆ ತಂದರು ಎಂದು ಆರೋಪಿಸಿದರು.

ಇದು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಅಂತಿಮವಾಗಿ ಸ್ವೀಕರ್ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.

ಕಲಾಪ ಪುನರಾರಂಭವಾದಾಗ, ಸ್ಪೀಕರ್ ಖಾದರ್ ಅವರು, ಈ ಸಮಸ್ಯೆಗೆ ತಾಂತ್ರಿಕ ಕಾರಣ ಎಂದು ಹೇಳಿದರು ಮತ್ತು ಸಾಧ್ಯವಾದಷ್ಟು ಬೇಗ ಅದನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸದಸ್ಯರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT