ಸಿಎಂ ಸಿದ್ದರಾಮಯ್ಯ 
ರಾಜ್ಯ

ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!

ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಮನವಿ ಸಲ್ಲಿಸಿದ್ದರು.

ಕೊಪ್ಪಳ: ಕೊಪ್ಪಳ ಪಟ್ಟಣದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸ್ಥಾಪಿಸುತ್ತಿರುವ ಉಕ್ಕು ಮತ್ತು ವಿದ್ಯುತ್ ಸ್ಥಾವರದ ಕಾಮಗಾರಿಯನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ತಿಳಿಸಿ ಉಕ್ಕು ಸ್ಥಾವರದ ಕೆಲಸವನ್ನು ನಿಲ್ಲಿಸುವಂತೆ ಮನವಿ ಮಾಡಿದರು.

ಕಳೆದ ತಿಂಗಳಷ್ಟೇ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ 54,000 ಕೋಟಿ ರೂ. ವೆಚ್ಚದಲ್ಲಿ ಸ್ಥಾವರವನ್ನು ಸ್ಥಾಪಿಸಲು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗಿತ್ತು. ಸ್ಥಾವರವು ಸ್ಥಾಪನೆಯಾದರೆ, ಮಾಲಿನ್ಯ ಮತ್ತಷ್ಟು ಹೆಚ್ಚಾಗುತ್ತದೆ ಎಂದು ನಿವಾಸಿಗಳು ದೂರಿದ್ದಾರೆ, ಈಗಾಗಲೇ ಪಟ್ಟಣವು ಈಗಾಗಲೇ ಅನೇಕ ಕೈಗಾರಿಕೆಗಳಿಂದಾಗಿ ಆರೋಗ್ಯದ ಅಪಾಯವನ್ನು ಎದುರಿಸುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮತ್ತು ಇತರರು ಸ್ಥಾವರದ ಅಪಾಯಗಳ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿದರು, ಸಿದ್ಧರಾಮಯ್ಯ ತಕ್ಷಣವೇ ಕೊಪ್ಪಳ ಜಿಲ್ಲಾಧಿಕಾರಿಗೆ ಎಲ್ಲಾ ಪೂರ್ವಸಿದ್ಧತಾ ಕಾರ್ಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಯೋಜನೆಗೆ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಚರ್ಚಿಸಿ ವಿವರವಾದ ವರದಿ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದರು. ಫೆಬ್ರವರಿ 24 ರಂದು, ಕೊಪ್ಪಳ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳ ನೂರಾರು ನಿವಾಸಿಗಳು ಮತ್ತು ಕಾರ್ಯಕರ್ತರು ತಾಲ್ಲೂಕು ಕ್ರೀಡಾಂಗಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಿವಾಸಿಗಳ ತೀವ್ರ ಪ್ರತಿಭಟನೆಯ ಹೊರತಾಗಿಯೂ ಉಕ್ಕಿನ ಕಂಪನಿಯ ಆಡಳಿತ ಮಂಡಳಿಯು ಭೂಮಿ ಪೂಜೆ ನೆರವೇರಿಸಿದೆ ಎಂದು ಮಂಗಳವಾರ ಪರಿಸರವಾದಿಗಳು ತಿಳಿಸಿದ್ದಾರೆ. "ನಾವು ಅಭಿವೃದ್ಧಿಯನ್ನು ವಿರೋಧಿಸುವುದಿಲ್ಲ, ಆದರೆ ಉಕ್ಕಿನ ಸ್ಥಾವರ ಯೋಜನೆಯನ್ನು ನಾವು ವಿರೋಧಿಸುತ್ತೇವೆ ಏಕೆಂದರೆ ಅದು ಜನರಿಗೆ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

SCROLL FOR NEXT