ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೆಂಡಾಮಂಡಲ!

ದೇಶದಲ್ಲಿ ಅನೇಕ ಇತರ ಸಮುದಾಯಗಳಿರುವಾಗ ಅಲ್ಪಸಂಖ್ಯಾತರೆಂದರೆ ಯಾವಾಗಲೂ ಮುಸ್ಲಿಮರು ಎಂದು ಏಕೆ ಕರೆಯಲಾಗುತ್ತದೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡಾ 4ರಷ್ಟು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂದು ಬಿಜೆಪಿ ಬುಧವಾರ ಆರೋಪಿಸಿದೆ.

ರಾಜ್ಯಾದ್ಯಂತ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿರುವಾಗ, ಆಡಳಿತಾರೂಢ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಸರ್ಕಾರಿ ಒಪ್ಪಂದಗಳಲ್ಲಿ ಶೇಕಡಾ ನಾಲ್ಕು ಮೀಸಲಾತಿ ನೀಡುವ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ದೇಶದಲ್ಲಿ ಅನೇಕ ಇತರ ಸಮುದಾಯಗಳಿರುವಾಗ ಅಲ್ಪಸಂಖ್ಯಾತರೆಂದರೆ ಯಾವಾಗಲೂ ಮುಸ್ಲಿಮರು ಎಂದು ಏಕೆ ಕರೆಯಲಾಗುತ್ತದೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

"ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವೇ ಹೊರತು ಬೇರೆ ಯಾರನ್ನೂ ಅಲ್ಲವೇ? ಕಾಂಗ್ರೆಸ್‌ನ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಗಳು ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುತ್ತವೆ" ಎಂದು ವಿಜಯೇಂದ್ರ ಸುದ್ದಿಗಾರರಿಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿಜವಾಗಿಯೂ ಹಿಂದುಳಿದ ಸಮುದಾಯಗಳ ನಾಯಕರಾಗಿದ್ದರೆ, ಅವರು ತಮ್ಮನ್ನು ತಾವು ಹಿಂದುಳಿದ ಸಮುದಾಯಗಳ ನಾಯಕ ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಅವರಿಗೆ ಅಧಿಕಾರ ನೀಡುವ ನೀತಿಗಳನ್ನು ತರಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಗೆ ಪಾಠ ಕಲಿಸುವಂತೆ ವಿಜಯೇಂದ್ರ ಜನರಿಗೆ ಕರೆ ನೀಡಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತರ ತುಷ್ಟೀಕರಣದ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು. ಈ ರೀತಿಯ ಮೀಸಲಾತಿಗಳು ಸಂವಿಧಾನ ವಿರೋಧಿ. ಭಾರತೀಯ ಸಂವಿಧಾನದ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿರುದ್ಧವಾಗಿದ್ದರು ಎಂದು ಅವರು ಪ್ರತಿಪಾದಿಸಿದರು.

"ಸರ್ಕಾರ ಸಂವಿಧಾನ ಮತ್ತು ಅದರ ಮೂಲಭೂತ ಅಂಶಗಳನ್ನು ವಿರೋಧಿಸುತ್ತಿದೆ" ಎಂದು ಯತ್ನಾಳ್ ಆರೋಪಿಸಿದರು. ನಡೆಯುತ್ತಿರುವ ಕರ್ನಾಟಕ ವಿಧಾನಸಭೆಯಲ್ಲಿ ಈ ವಿಷಯವನ್ನು ಎತ್ತುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT