ವಿಧಾನಸಭೆಯ ಮುಖ್ಯದ್ವಾರ. 
ರಾಜ್ಯ

ವಿಧಾನಸಭೆ ಅಧಿವೇಶನ: ಬೆಂಗಳೂರು ಅರಮನೆ ವಿಧೇಯಕ ಸೇರಿ 5 ಮಸೂದೆಗಳ ಮಂಡನೆ

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025 ಕೂಡ ಇದೇ ಉದ್ದೇಶವನ್ನು ಹೊಂದಿದೆ.

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಬಳ್ಳಾರಿ ಮತ್ತು ಜಯಮಹಲ್ ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಜಾಗ ಸ್ವಾಧೀನಕ್ಕೆ ಬದಲಾಗಿ ಮೈಸೂರು ರಾಜ ಮನೆತದ ವಾರಸುದಾರರಿಗೆ ರೂ.3014 ಕೋಟಿ ವರ್ಗಾವಣೆ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ಪರಿಹಾರ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ಮಸೂದೆ ಮಹತ್ವ ಪಡೆದುಕೊಂಡಿದೆ.

ಸುಪ್ರೀಂಕೋರ್ಟ್ ಆದೇಶ ಪಾಲೆ ಮಾಡಿದರೆ ಸರ್ಕಾರಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಸರ್ಕಾರ ನಿರ್ಧರಿಸಿದ್ದು, ಹೀಗಾಗಿಯೇ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಆದರೆ, ಸುಪ್ರೀಂಕೋರ್ಟ್ ಅದನ್ನು ಒಪ್ಪದೆ ಟಿಡಿಆರ್ ಪರಿಹಾರ ನೀಡುವ ಆದೇಶ ಪಾಲಿಸುವಂತೆ ಸೂಚನೆ ನೀಡಿತ್ತು. ಅದರ ನಡುವೆಯೂ ಇದೀಗ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲು ಸರ್ಕಾರ ಮುಂದಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025 ಅನ್ನು ಮಂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ವಿಧಾನಮಂಡಲದಲ್ಲಿ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ವನ್ನು ಮಂಡನೆ ಮಾಡಿದ್ದಾರೆ.

ಈ ವಿಧೆಯಕವು 1996ರ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಗೆ ಪೂರಕವಾಗಿದೆ. ಹಿಂದಿನ ವಿಧೇಯಕವು ಬೆಂಗಳೂರು ಅರಮನೆಯ 472.16 ಎಕರೆ ಭೂಮಿಯನ್ನು ರೂ.11 ಕೋಟಿ ಎಂದು ನಿಗದಿ ಮಾಡಲಾಗಿದೆ. ಅದರಂತೆ ಪರಿಹಾರ ನೀಡಬಹುದಾಗಿದೆ. ಆದರೆ, ರಸ್ತೆ ಅಗಲೀಕರಣಕ್ಕಾಗಿ ಮಾಡಿಕೊಳ್ಳಲಾಗುವ 15.39 ಎಕರೆ ಅರಮನೆ ಮೈದಾನದ ಭೂಮಿಗೆ ಕರ್ನಾಟಕ ಸ್ಟಾಂಪು ಅಧಿನಿಯಮ 1957ರ 45ಬಿ ಪ್ರಕರಣದ ಪ್ರಕಾರ ಅಕ್ಕಪಕ್ಕದ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯದಂತೆ ಟಿಡಿಆರ್ ನೀಡಬೇಕು ಎಂದು ಆದೇಶಿಸಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಿಂದ ಸಂಕೀರ್ಣ ಪರಿಣಾಮಗಳು ಬೀರಲಿವೆ. ಅದನ್ನು ತಪ್ಪಿಸುವ ಉದ್ದೇಶದೊಂದಿಗೆ ನೂತನ ವಿಧೇಯಕ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ದ ಜೊತೆಗೆ ಸರ್ಕಾರ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ 2025ನ್ನು ಮಂಡಿಸಿದೆ.

ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ಮಸೂದೆ 2025 ಮಸೂದೆಯು ಆರ್ಥಿಕವಾಗಿ ದುರ್ಬಲವಾಗಿರುವವರನ್ನು ಹೆಚ್ಚಿನ ಬಡ್ಡಿ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ರಕ್ಷಿಸುವ ಉದ್ದೇಶವನ್ನು ಹೊಂದಿದೆ.

ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025 ಕೂಡ ಇದೇ ಉದ್ದೇಶವನ್ನು ಹೊಂದಿದೆ.

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ 2025ಯನ್ನು ಮಾರುಕಟ್ಟೆ ಸಮಿತಿಯ ಅಧಿಕಾರ ವ್ಯಾಪ್ತಿಯನ್ನು ಮಾರುಕಟ್ಟೆ, ಉಪ-ಮಾರುಕಟ್ಟೆ ಪ್ರದೇಶಕ್ಕೆ ವಿಸ್ತರಿಸಲು, ಗೋದಾಮಿನ ಸೇವಾ ಪೂರೈಕೆದಾರರ ಜವಾಬ್ದಾರಿಯನ್ನು ನಿಗದಿಪಡಿಸಲು ಮತ್ತು ಇ-ಕಾಮರ್ಸ್ ವೇದಿಕೆಗಳನ್ನು ಸ್ಥಾಪಿಸಲು ಪರಿಚಯಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT