ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ಅತಿದ್ಧಿದ ವೇಶನದ ಸಂದರ್ಭದಲ್ಲಿ ಬಿಜೆಪಿ ಶಾಸಕರು ಸದನದ ಹೊರಗೆ ನಿಂತಿರುವುದು. 
ರಾಜ್ಯ

ವಿಧಾನಸಭೆ ಕಲಾಪದ ನೇರಪ್ರಸಾರದಲ್ಲಿ ವಿಪಕ್ಷಗಳ ಭಾಷಣಕ್ಕೆ ಕತ್ತರಿ: ಅಧಿಕಾರಿ ಅಮಾನತು

ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಬೆಂಗಳೂರು: ಸದನದ ಕಾರ್ಯ ಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು.

ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಾದ ಕೆಲವು ನಿಮಿಷಗಳ ಬಳಿಕ ಸಮಸ್ಯೆ ಬಗೆಹರಿಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT