ಈಶ್ವರ್ ಖಂಡ್ರೆ 
ರಾಜ್ಯ

ಬೆಂಗಳೂರು: ವಾಯುಪಡೆ ಸ್ವಾಧೀನದ 444 ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಈಶ್ವರ್ ಖಂಡ್ರೆ ಸೂಚನೆ

ವಾಯುಪಡೆಗೆ 1987ರಲ್ಲಿ 570 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ನಗರದ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಾಯುಪಡೆಗೆ 1987ರಲ್ಲಿ 570 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿತ್ತು. ಈ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಆದರೂ ಭಾರತೀಯ ವಾಯು ಪಡೆ ಮಾ. 1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು ಎಂದು ಅರಣ್ಯ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

2017ರ ಸರ್ಕಾರದ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ನಿಯಮ ಮೀರಿ, ಅಕ್ರಮವಾಗಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು. ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ. ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.

ಕೂಡಲೇ ಅರಣ್ಯ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT