ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ online desk
ರಾಜ್ಯ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ: ಶೀಘ್ರದಲ್ಲೇ ಕೇಂದ್ರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ

ವಿಧಾನಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಅವರು ಉತ್ತರ ನೀಡಿದರು.

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸುವ ವೆಚ್ಚವನ್ನು ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವು ಕುರಿತು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಅವರು ಉತ್ತರ ನೀಡಿದರು.

ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದೆ. ಅದರಿಂದಾಗಿ ಆ ಸಂಸ್ಥೆಯೇ ಭೂಸ್ವಾಧೀನ ಮಾಡಿಕೊಂಡು, ರನ್‌ ವೇ ನಿರ್ಮಿಸಬೇಕು. ಬೇಕಾದಲ್ಲಿ ರಾಜ್ಯ ಸರಕಾರ ಆರ್ಥಿಕ ನೆರವು ಹೊರತುಪಡಿಸಿ ಉಳಿದ ನೆರವು ನೀಡಲಿದೆ ಎಂದು ಹೇಳಿದರು.

ರಾಜ್ಯವು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುತ್ತಿದ್ದರೂ, ಅವುಗಳನ್ನು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆಗೆ ಹಸ್ತಾಂತರಿಸಬೇಕಾಗಿರುವುದರಿಂದ, ಕೇಂದ್ರದ ವಿಮಾನ ನಿಲ್ದಾಣಗಳ ಹಣಗಳಿಸುವ ಯೋಜನೆಯ ವಿರುದ್ಧ ರಾಜ್ಯ ಪ್ರತಿಭಟಿಸುತ್ತಿದೆ ಎಂದು ತಿಳಿಸಿದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕರು, ವಿಮಾನನಿಲ್ದಾಣವನ್ನು ಖಾಸಗಿ ಸಂಸ್ಥೆಗೆ ನಿರ್ವಹಣೆಗೆ ಮಾತ್ರ ನೀಡಲಾಗಿದೆ. ಹೀಗಾಗಿ ರಾಜ್ಯ ಸರಕಾರವೂ ರನ್‌ ವೇ ನಿರ್ಮಿಸಬಹುದು. ಇಲ್ಲವಾದರೆ ಅಗತ್ಯ ಭೂಮಿ ಒದಗಿಸಬೇಕು. ಇದು ನೂರಾರು ಜನರ ಜೀವನದ ಪ್ರಶ್ನೆ. ಹೀಗಾಗಿ ರಾಜ್ಯ ಸರಕಾರ ನಿಲುವು ಬದಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT