ಬಿಬಿಎಂಪಿ ಕಚೇರಿ 
ರಾಜ್ಯ

7 ಪಾಲಿಕೆಗಳಾಗಿ ಬಿಬಿಎಂಪಿ ವಿಭಜನೆ; ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲು ಸಮಿತಿ ಶಿಫಾರಸು!

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳನ್ನು ಸೇರ್ಪಡೆ ಮಾಡಬಹುದು.

ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ವರದಿಯನ್ನು ಮಂಡನೆ ಮಾಡಲಾಯಿತು.

ವರದಿಯಲ್ಲಿನ ಶಿಫಾರಸುಗಳ ಪ್ರಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ ಅಧಿಸೂಚನೆ ಜಾರಿಯಾದ ತಕ್ಷಣ ಅನುಷ್ಟಾನಕ್ಕೆ ಬರಲಿದೆ. ಗ್ರೇಟರ್ ಬೆಂಗಳೂರಿನಲ್ಲಿ 7 ಕ್ಕೂ ಮೀರದಂತೆ ಮಹಾನಗರ ಪಾಲಿಕೆಗಳಿರಬೇಕು ಎಂದು ಸಲಹೆ ನೀಡಲಾಗಿದೆ. ಮೇಯರ್ ಮತ್ತು ಉಪಮೇಯರ್ ಅವರ ಅವಧಿಯನ್ನು 30 ತಿಂಗಳುಗಳಾಗಿರಲು ಸಮಿತಿ ಶಿಫಾರಸು ಮಾಡಿತು. ಮಸೂದೆಯನ್ನು ಎರಡೂ ಸದನಗಳಲ್ಲಿ ಮಂಡಿಸಲು ಸಹ ಸೂಚಿಸಿತು.

ಪ್ರತಿ ಪಾಲಿಕೆಯು ಕನಿಷ್ಠ 10 ಲಕ್ಷ ಲಕ್ಷ ಜನಸಂಖ್ಯೆ ಹೊಂದಿರಬೇಕು. ಜನಸಾಂದ್ರತೆ ಪ್ರತಿ ಕಿ.ಮೀ.ಗೆ 5 15 ಸಾವಿರಕ್ಕಿಂತ ಕಡಿಮೆ ಇರಬಾರದು. ಸ್ಥಳೀಯ ಆಡಳಿತದಿಂದ ವರ್ಷಕ್ಕೆ ಗರಿಷ್ಠ 300 ಕೋಟಿಗೂ ಹೆಚ್ಚಿನ ಆದಾಯ ಇರಬೇಕು. ಕೃಷಿಯೇತರ ಚಟುವಟಿಕೆಗಳ ಉದ್ಯೋಗ ಪ್ರಮಾಣ ಶೇ.50 ಕ್ಕಿಂತಲೂ ಕಡಿಮೆ ಇರಬಾರದು ಎಂದು ಉಲ್ಲೇಖಿಸಲಾಗಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶಗಳನ್ನು ಸೇರ್ಪಡೆ ಮಾಡಬಹುದು. ಮಹಾನಗರ ಪಾಲಿಕೆಗಳಿಗೆ ಮೇಯರ್ ಇರಲಿದ್ದು ಅವರ ಅಧಿಕಾರಾವಧಿ 5 ವರ್ಷ ಆಗಿರಲಿದೆ. ವಾರ್ಡ್ ವಿಂಗಡಣೆಯನ್ನು ಜನಸಂಖ್ಯೆ ಆಧಾರದ ಮೇಲೆ ಸರ್ಕಾರವೇ ನಿರ್ಧರಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ವಾರ್ಡ್ ಗಳನ್ನು ಸೀಮಿತಗೊಳಿಸಬೇಕು. ಒಂದು ವಾರ್ಡನ್ನು 2 ವಿಧಾನಸಭಾ ವ್ಯಾಪ್ತಿಗೆ ಒಳಗೊಳ್ಳುವಂತೆ ವಿಂಗಡಣೆ ಮಾಡಬಾರದು ಎಂದು ಸಲಹೆ ನೀಡಲಾಗಿದೆ.

ಪ್ರಮುಖವಾಗಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ. ಅದರ ಕೆಳಗೆ ಮಹಾನಗರ ಪಾಲಿಕೆಗಳಿರಲಿದ್ದು, ಮೇಯರ್, ಆಯುಕ್ತರು, ಜಂಟಿ ಆಯುಕ್ತರು. ಸ್ಥಾಯಿ ಸಮಿತಿ ಮತ್ತು ವಾರ್ಡ್ ಸಮಿತಿಗಳನ್ನು ರಚಿಸಲಾಗುತ್ತದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರು ಗ್ರೇಟರ್ ಬೆಂಗಳೂರಿನ ಉಪಾಧ್ಯಕ್ಷರಾಗಿರಲಿದ್ದಾರೆ.

ಉತ್ತಮ ಆಡಳಿತ ನೀಡಲು ಮತ್ತು ಅದನ್ನು ನಿರ್ವಹಿಸಲು, ಅಸ್ತಿತ್ವದಲ್ಲಿರುವ ಪಾಲಿಕೆಯ ಕೆಲಸವನ್ನು ಪರಿಶೀಲಿಸಬೇಕು ಮತ್ತು ಅದರ ಅಧಿಕಾರವನ್ನು ವಿಕೇಂದ್ರೀಕರಿಸಬೇಕು ಎಂದು ಅವರು ಹೇಳಿದರು.

ಏಳು ನಿಗಮಗಳಲ್ಲಿ ಪ್ರತಿಯೊಂದೂ ಸಮಾನ ಸಂಖ್ಯೆಯ ವಾರ್ಡ್‌ಗಳನ್ನು ಹೊಂದಿರಬೇಕು ಮತ್ತು ಒಂದು ನಿಗಮವು 100 ಕ್ಕಿಂತ ಹೆಚ್ಚು ವಾರ್ಡ್‌ಗಳನ್ನು ಹೊಂದಿರಬಾರದು ಎಂದು ಸಮಿತಿ ಒತ್ತಿ ಹೇಳಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗೆ ಎರಡು ವಾರ್ಡ್‌ಗಳಿಂದ ಸ್ಪರ್ಧಿಸಲು ಅವಕಾಶ ನೀಡಬಾರದು.

ಸಮುದಾಯದ ಭಾಗವಹಿಸುವಿಕೆಯನ್ನು ಸುಲಭಗೊಳಿಸಲು ವಾರ್ಡ್ ಸಮಿತಿಗಳನ್ನು ಸಬಲೀಕರಣಗೊಳಿಸಬೇಕು ಮತ್ತು ನಗರ ಆಡಳಿತದ ಮೂಲ ಘಟಕಗಳನ್ನಾಗಿ ಮಾಡಬೇಕು ಎಂದು ಅದು ಒತ್ತಿ ಹೇಳಿದೆ. ಪ್ರಮುಖ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದ ಬಂಡವಾಳ ಅನುದಾನವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಡುಗಡೆ ಮಾಡಬೇಕೆಂದು ಅದು ಶಿಫಾರಸು ಮಾಡಿದೆ. ಪ್ರತಿಯೊಂದು ನಗರ ನಿಗಮವನ್ನು ಸಾಮಾನ್ಯ ಪೂರ್ವಪ್ರತ್ಯಯದೊಂದಿಗೆ ಹೆಸರಿಸಬೇಕು ಎಂದು ಸಲಹೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT