ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಬಜೆಟ್ 2025: ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿಹಿ ಸುದ್ದಿ!

ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಲು ನಿರ್ಧರಿಸಲಾಗಿದ್ದು, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್​ ಮಂಡನೆ ಮಾಡಿದ್ದು, ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಅವರು, ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್​ ಮಂಡಿಸುತ್ತಿದ್ದೇನೆಂದು ಹೇಳಿದರು.

ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಲು ನಿರ್ಧರಿಸಲಾಗಿದ್ದು, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು.

ಇದೇ ವೇಳೆ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಳ ಮಾಡಿರುವುದಾಗಿ ತಿಳಿಸಿದ ಸಿಎಂ ಮಾಸಿಕ 1000 ರೂ. ಕೊಡುವುದಾಗಿ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT