ಬಜೆಟ್ ಪ್ರತಿಯೊಂದಿಗೆ ನಗುತ್ತಾ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ  
ರಾಜ್ಯ

'ಗ್ಯಾರಂಟಿ'ಗಳು ಉಚಿತ ಉಡುಗೊರೆಗಳಲ್ಲ, ಬಡವರ ನೋವನ್ನು ನಿವಾರಿಸಲು ಇರುವ ಯೋಜನೆಗಳು: ಸಿಎಂ ಸಿದ್ದರಾಮಯ್ಯ

ಇಂದು ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳಿಂದ ಮತದಾರರ ಗಮನ ಸೆಳೆದು 2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ನಂತರ ಸಾಕಷ್ಟು ಟೀಕೆಗಳನ್ನು ವಿರೋಧ ಪಕ್ಷಗಳಿಂದ ಮತ್ತು ಜನರಿಂದ ಎದುರಿಸುತ್ತಾ ಬಂದಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಉಳಿದ ಅಬಿವೃದ್ಧಿ ಕೆಲಸಗಳು ಸರ್ಕಾರದಲ್ಲಿ ಆಗುತ್ತಿಲ್ಲ, ಸರ್ಕಾರಕ್ಕೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳಿವೆ. ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಸರ್ಕಾರದ ಸಚಿವರುಗಳೇ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತಿವೆಯಾ ಎಂಬ ಮಾತುಗಳು ಸಹ ಕೇಳಿಬರುತ್ತಿದೆ.

ಗ್ಯಾರಂಟಿ ಯೋಜನೆ ಸಮರ್ಥಿಸಿಕೊಂಡ ಸಿಎಂ

ಇಂದು ವಿಧಾನಸಭೆಯಲ್ಲಿ 16ನೇ ಬಾರಿ 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ಸಮಾಜದಲ್ಲಿ ಬಡವರ ನೋವನ್ನು ನಿವಾರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ, ಅವು ಜನತೆಗೆ "ಉಚಿತ ಉಡುಗೊರೆಗಳಲ್ಲ" ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಮೂಲಕ ಗ್ಯಾರಂಟಿ ಯೋಜನೆಗಳು ಸದ್ಯಕ್ಕೆ ಸ್ಥಗಿತವಾಗುವುದಿಲ್ಲ ಎಂಬ ಸೂಚನೆಯನ್ನು ಸಹ ಸಿದ್ದರಾಮಯ್ಯ ನೀಡಿದ್ದಾರೆ.

2024-25ನೇ ಸಾಲಿಗೆ ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂಪಾಯಿಗಳನ್ನು ನಿಗದಿಪಡಿಸಿದ್ದೇವೆ, ಕಳೆದ ಎರಡು ಬಜೆಟ್‌ಗಳಲ್ಲಿ ನಾವು ಖಾತರಿಗಳನ್ನು GSDP ಯ ಶೇಕಡಾ 3ರಷ್ಟು ವಿವೇಚನಾಯುಕ್ತ ಹಣಕಾಸಿನ ಕೊರತೆ ಮಾನದಂಡ ಮತ್ತು ಸಾಲ-GSDP ಅನುಪಾತವು ಶೇಕಡಾ 25ರೊಳಗೆ ನಿರ್ವಹಿಸಿದ್ದೇವೆ ಎಂಬುದನ್ನು ಗಮನಿಸಬೇಕು ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

IPL 2026: RCB vs PBKS ಪಂದ್ಯದಲ್ಲಿ ಎರಡು ದೊಡ್ಡ ದಾಖಲೆ ನಿರ್ಮಿಸಿದ Virat Kohli

IPL 2026: ಕನ್ನಡಿಗ KL Rahul, ಪೊರೆಲ್ ಭರ್ಜರಿ ಬ್ಯಾಟಿಂಗ್, RR ವಿರುದ್ಧ DCಗೆ 5 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಕನಸಿಗೆ ಭಾರಿ ಪೆಟ್ಟು!

IPL 2026: ರನ್ ಮೆಷಿನ್ Virat Kohli ರೆಕಾರ್ಡ್ ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ!

ಖ್ಯಾತ ತಮಿಳು ನಿರ್ಮಾಪಕ K Rajan ಆತ್ಮಹತ್ಯೆ; ಚೆನ್ನೈನಲ್ಲಿ 85ನೇ ವಯಸ್ಸಿನಲ್ಲಿ ನಿಧನ!

SCROLL FOR NEXT