ಸಿದ್ದರಾಮಯ್ಯ  
ರಾಜ್ಯ

ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿದ ಸಿಎಂ; ಇದು ಹಲಾಲ್​ ಬಜೆಟ್​: ಬಿಜೆಪಿ ಟೀಕೆ

ಕರ್ನಾಟಕ ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ!! ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಜೆಟ್ ಹಲಾಲ್ ಬಜೆಟ್ ಎಂದು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಟೀಕಿಸಿದೆ.

ಬಜೆಟ್ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕರ್ನಾಟಕ ಬಜೆಟ್‌ ಅನ್ನು ಇಸ್ಲಾಮೀಕರಣಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯಗಳಿಗೆ ನೀವು ಕೊಟ್ಟಿರುವುದು ಕೇವಲ ಚಿಪ್ಪು ಮಾತ್ರ!! ಎಂದು ವಾಗ್ದಾಳಿ ನಡೆಸಿದೆ.

ಇಂದು ವಿಧಾನಸಭೆಯಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳಿಗೆ ಬರೋಬ್ಬರಿ 51 ಸಾವಿರ ಕೋಟಿ ರೂ. ನೀಡುವುದರ ಜೊತೆಗೆ ಹತ್ತು ಹಲವು ಹೊಸ ಘೋಷಣೆಗಳನ್ನೂ ಮಾಡಿದ್ದಾರೆ.

ಈ ಪೈಕಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಎಲ್ಲರ ಕಣ್ಣಿಗೆ ಕಾಣುವಂತೆ ಭರಪೂರ ಅನುದಾನವನ್ನು ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಲಾಲ್ ಬಜೆಟ್, ಮುಸ್ಲಿಂ ಓಲೈಕೆ ಬಜೆಟ್ ಎಂದು ವಿಪಕ್ಷಗಳ ನಾಯಕರು ಟೀಕಿಸಿದ್ದಾರೆ.

  • ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ

  • ಮುಸ್ಲಿಮರ ಸರಳ ಮದುವೆಗೆ 50 ಸಾವಿರ ರೂ.

  • ವಕ್ಫ್‌, ಖಬರಸ್ಥಾನಗಳ ಮೂಲಸೌಕರ್ಯಕ್ಕೆ 150 ಕೋಟಿ ರೂ.

  • ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 50 ಲಕ್ಷ ರೂ.

  • ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ

  • KEA ಅಡಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ‌ ಕಡಿತ

  • ಉಲ್ಲಾಳದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು

  • ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ

  • ಬೆಂಗಳೂರಿನ ಹಜ್‌ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ

  • ಮುಸ್ಲಿಮ್‌ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ

ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ರಾಜ್ಯ ಕಾಂಗ್ರೆಸ್ ನ ದಿವಾಳಿ ಮಾಡೆಲ್‌ ಜಾರಿ ಆಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ