ಮೃತ ಯುವಕರು 
ರಾಜ್ಯ

ಕಲಬುರಗಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಯುವಕರು ಸಾವು

ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಸೇಡಂ ತಾಲ್ಲೂಕಿನ ಹಾಬಾಳ ಗ್ರಾಮದ ನಿವಾಸಿಗಳಾದ ಸಿದ್ದು (25), ಸುರೇಶ (20), ಮಲ್ಲಿಕಾರ್ಜುನ (20), ಪ್ರಕಾಶ್‌ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕಲಬುರಗಿ: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ(ಟಿ) ಗ್ರಾಮದ ಬಳಿ ಶುಕ್ರವಾರ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.

ಇಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಸೇಡಂ ತಾಲ್ಲೂಕಿನ ಹಾಬಾಳ ಗ್ರಾಮದ ನಿವಾಸಿಗಳಾದ ಸಿದ್ದು (25), ಸುರೇಶ (20), ಮಲ್ಲಿಕಾರ್ಜುನ (20), ಪ್ರಕಾಶ್‌ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿನಿಂದ ಬರುತ್ತಿದ್ದ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ.

ಪಲ್ಸರ್ ಮತ್ತು ಸ್ಪ್ಲೈಂಡರ್ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಲ್ಲಿಕಾರ್ಜುನ ಮತ್ತು ಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುರೇಶ ಹಾಗೂ ಪ್ರಕಾಶ್ ಇಬ್ಬರು ಆಸ್ಪತ್ರೆಗೆ ರವಾನಿಸಿದ ವೇಳೆ ಮೃತಪಟ್ಟಿದ್ದಾರೆ ಎಂದು ಸೇಡಂ ಪೊಲೀಸರು ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT