ವಿಧಾನಸೌಧ-ಸಿಎಂ ಸಿದ್ದರಾಮಯ್ಯ online desk
ರಾಜ್ಯ

ಸಿಎಂ ಬಜೆಟ್ ಭಾಷಣ: ಒಂದು ಕ್ಷಣ ಇಡೀ ಸದನ ಗಾಬರಿ! ವಿಡಿಯೋ ವೈರಲ್

ಈಗ 2025-26 ನೇ ಸಾಲಿನ ಬಜೆಟ್ ಮಂಡನೆ ವೇಳೆ ವ್ಯಕ್ತಿಯೋರ್ವ ಕೂಗಿದ್ದಕ್ಕಾಗಿ ಇಡೀ ಸದನ ಒಂದು ಕ್ಷಣ ಗಾಬರಿಗೆ ಒಳಗಾಗಿತ್ತು.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16 ನೇ ಬಜೆಟ್ ಮಂಡನೆ ಮಾಡಿದ್ದು, ಗ್ಯಾರೆಂಟಿ ಯೋಜನೆಗಳಿಗೆ ಅನುದಾನಗಳ ಜೊತೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದಾಗ ಕೆಲ ಕಾಲ ಸದನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಹಿಂದೆ 2023 ರ ಜಲೈ ನಲ್ಲಿಯೂ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಸದನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈಗ 2025-26 ನೇ ಸಾಲಿನ ಬಜೆಟ್ ಮಂಡನೆ ವೇಳೆ ವ್ಯಕ್ತಿಯೋರ್ವ ಕೂಗಿದ್ದಕ್ಕಾಗಿ ಇಡೀ ಸದನ ಒಂದು ಕ್ಷಣ ಗಾಬರಿಗೆ ಒಳಗಾಗಿತ್ತು.

ಒಳ ಮೀಸಲಾತಿಗೆ ಸಂಬಂಧಿಸಿದ ಕೂಗು ಇದಾಗಿದೆ. ಸಿಎಂ ಬಜೆಟ್ ಭಾಷಣದ ವೇಳೆ ಒಳ ಮೀಸಲಾತಿ ಸದ್ದು ಮಾಡಿದ್ದು, ಒಳಮೀಸಲಾತಿ ನೀಡಿ ಎಂದು ವ್ಯಕ್ತಿಯೋರ್ವ ಜೋರಾಗಿ ಕೂಗಿದ ಪರಿಣಾಮ ಇಡೀ ಸದನ ಗಾಬರಿಗೆ ಒಳಗಾಗಿತ್ತು. ಬಳಿಕ ಆ ವ್ಯಕ್ತಿ ಕೂಗಿದ್ದಕ್ಕೆ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಖಾದರ್ ಮಾರ್ಷಲ್ ಗಳಿಗೆ ಸೂಚಿಸಿದರು.

2023-24ನೇ ಸಾಲಿನ ಬಜೆಟ್​​ ಮಂಡನೆ ವೇಳೆ ವೇಳೆ ಭದ್ರತಾ ಲೋಪವಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸದನದ ಒಳಗೆ ಆಗಮಿಸಿ ಶಾಸಕರ ಸ್ಥಾನದಲ್ಲಿ ಕುಳಿತಿರುವ ಪ್ರಸಂಗ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT