ಬೆಂಗಳೂರು: ಮಾರ್ಚ್ 9ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10ರವರೆಗೆ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಮೂರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್ ಸಿಎಲ್ ಪ್ರಕಟಿಸಿದೆ.
ಚಲ್ಲಘಟ್ಟ ಮತ್ತು ವೈಟ್ಫೀಲ್ಡ್ ನಡುವಿನ ಪರ್ಪಲ್ ಲೈನ್ನಲ್ಲಿ ಹಳಿ ನಿರ್ವಹಣೆಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು BMRCL ತಿಳಿಸಿದೆ. ಕಬ್ಬನ್ ಪಾರ್ಕ್, ಡಾ. ಬಿಆರ್ ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸರ್ ಎಂ. ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ಪರ್ಪಲ್ ಲೈನ್) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಮೂರು ಗಂಟೆಗಳ ಕಾಲ ನಿಲ್ದಾಣಗಳು ಮುಚ್ಚಲ್ಪಡುತ್ತವೆ ಎಂದು ಬಿಎಂಆರ್ಸಿಎಲ್ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಪರ್ಪಲ್ ಲೈನ್ನಿಂದ ಗ್ರೀನ್ ಲೈನ್ಗೆ ಪ್ರಯಾಣಿಸಲು ಬೆಳಿಗ್ಗೆ 7 ರಿಂದ ಬೆಳಿಗ್ಗೆ 10 ರವರೆಗೆ ಕ್ಯೂಆರ್ ಟಿಕೆಟ್ಗಳು ಮತ್ತು ಟೋಕನ್ಗಳನ್ನು ಖರೀದಿಸದಂತೆ ಪ್ರಯಾಣಿಕರಿಗೆ ತಿಳಿಸಲಾಗಿದೆ.