ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ  
ರಾಜ್ಯ

ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಸಿದ್ದರಾಮಯ್ಯ ಬಜೆಟ್

ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2025-26ನೇ ಬಜೆಟ್ ಮಂಡಿಸಿದ್ದು, ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾದ ಯಾವುದೇ ಪ್ರಸ್ತುತ ನಡೆಯುತ್ತಿರುವ ಅಥವಾ ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡಿಲ್ಲ. ಹೀಗಾಗಿ ಹಾಸನ ಜನತೆಗೆ ಮತ್ತೊಮ್ಮೆ ನಿರಾಸೆಯಾಗಿದೆ.

ನರಸಿಂಹರಾಜ ವೃತ್ತ ಮತ್ತು ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ನಡುವಿನ ಸ್ಥಗಿತಗೊಂಡ ಫ್ಲೈ ಓವರ್, ಜಿಲ್ಲೆಯ ಜ್ವಲಂತ ಸಮಸ್ಯೆಯನ್ನು ಪರಿಹರಿಸಲು ಅತ್ಯಗತ್ಯ ಯೋಜನೆಯಾಗಿದೆ. ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಮತ್ತು ಆನೆ ಪುನರ್ವಸತಿ ಶಿಬಿರಕ್ಕೆ ಸಾಕಷ್ಟು ಅನುದಾನ ನಿರೀಕ್ಷಿಸಿದ್ದ ಜನರು ಬಜೆಟ್ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಹೆದ್ದಾರಿ ಸುಧಾರಣಾ ಯೋಜನೆಯ[ಕೆಶಿಪ್] ನಡೆಯುತ್ತಿರುವ ಕಾಮಗಾರಿಗಳನ್ನು ವೇಗಗೊಳಿಸಲು ಮಾತ್ರ ಸಿಎಂ ಕ್ರಮಗಳನ್ನು ಪ್ರಸ್ತಾಪಿಸಿದ್ದಾರೆ. ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರವನ್ನು 15 ಲಕ್ಷದಿಂದ 20 ಲಕ್ಷಕ್ಕೆ ಏರಿಸುವ ಮೂಲಕ ಸಿಎಂ ಆನೆಗಳ ಕಾಟದಿಂದ ಹತಾಶರಾದ ಜನರ ಮನವೊಲಿಸಲು ಯತ್ನಿಸಿದ್ದಾರೆ.

ಆನೆ ಕಾರ್ಯಪಡೆ ಸಮಿತಿಗೆ 17 ಕೋಟಿ ರೂ. ಮತ್ತು ಹಾಸನ, ಮಡಿಕೇರಿ ಮತ್ತು ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು 60 ಕೋಟಿ ರೂ. ಐತಿಹಾಸಿಕ ಮತ್ತು ವಿಶ್ವಪ್ರಸಿದ್ಧ ಪ್ರವಾಸಿ ತಾಣಗಳಾದ ಹಾಸನ ಜಿಲ್ಲೆಯ ಬೇಲೂರು, ಹಳೇಬೀಡುಗಳಿಗೆ ಮೂಲಸೌಕರ್ಯಗಳನ್ನು ಸುಧಾರಿಸಲು ಸಿಎಂ ಅನುದಾನ ಮೀಸಲಿಟ್ಟಿಲ್ಲ. ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತವನ್ನು ತಪ್ಪಿಸಲು ತಡೆ ಗೋಡೆ ನಿರ್ಮಿಸಲು ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ ಬಜೆಟ್ ನಲ್ಲಿ ಯಾವುದೇ ಅನುದಾನ ನೀಡಿಲ್ಲ.

ಆದಾಗ್ಯೂ, ಕಾಂಗ್ರೆಸ್ ನಾಯಕರು ಬಜೆಟ್ ಅನ್ನು ಸ್ವಾಗತಿಸಿದ್ದಾರೆ, ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಜೆಟ್ ಅನ್ನು ಅತ್ಯಂತ ಕಳಪೆ ಮತ್ತು ಕೆಟ್ಟ ಬಜೆಟ್ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯ ಅವರು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕೆಎಚ್‌ಬಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಅಹೇಳಿದ್ದಾರೆ.

ಇನ್ನು ಬಜೆಟ್ ಅನ್ನು ಸ್ವಾಗತಿಸಿದ ಹಾಸನ ಸಂಸದ ಶ್ರೇಯಸ್ ಪಟೇಲ್, ಸಿಎಂ ಸಾಮಾನ್ಯ ಜನರು, ಕೃಷಿ, ಕಾರ್ಮಿಕರು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಯೋಜನೆಗಳು ಮತ್ತು ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT