ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಿಎಂ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: ಪ್ರಕರಣ ದಾಖಲು, 7 ಮಂದಿ ಬಂಧನ

ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಹೆಚ್‌ಎಸ್‌ಆರ್ ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ ಎಂ.ರಾಜರತ್ನಂ ಸರ್ಜಾಪುರದ ಎಸ್.ವಿ.ಸುರೇಶ್, ಚೊಕ್ಕಸಂದ್ರದ ಎನ್.ವೇಣುಗೋಪಾಲ್. ಸರ್ಜಾಪುರ ಅಂಬೇಡ್ಕರ್ ಕಾಲೊನಿಯ ಎಸ್.ವಿ.ಶ್ರೀನಿವಾಸ್ ಎಂದು ಗುರ್ತಿಸಲಾಗಿದೆ.

ವಿಧಾನಸಭೆ ದಂಡನಾಯಕ ಹೆಚ್.ಎಸ್.ಜಯಕೃಷ್ಣ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು. ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಬಂಧಿತ ಏಳು ಮಂದಿ ಬಜೆಟ್‌ ಅಧಿವೇಶನದ ವೀಕ್ಷಣೆ ಮಾಡುತ್ತಿದ್ದರು. ಮುಖ್ಯಮಂತ್ರಿಗಳು ಬಜೆಟ್‌ ಮಂಡನೆ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸದಾಶಿವ ಆಯೋಗದ ವರದಿ ಜಾರಿ, ಒಳ ಮೀಸಲಾತಿ ಜಾರಿ ಮಾಡಿ ಎಂದು ಘೋಷಣೆ ಕೂಗಿದರು. ಕೂಡಲೇ ಮಾರ್ಷಲ್‌ಗ‌ಳು ಅವರನ್ನು ವಶಕ್ಕೆ ಪಡೆದುಕೊಂಡರು.

ನಂತರ ವಿಧಾನಸಭೆ ದಂಡನಾಯಕ ಎಚ್‌.ಎಸ್‌.ಜಯಕೃಷ್ಣ ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿ, ವಿಧಾನಸೌಧ ಠಾಣೆಗೆ ಕರೆದೊಯ್ದು ದೂರು ನೀಡಿದರು.

ಸದನದ ನಿಯಮಾವಳಿಯನ್ನು ಉಲ್ಲಂಘನೆ ಮಾಡುವುದರ ಜೊತೆಗೆ ಮಾರ್ಷಲ್‌ ಅಧಿಕಾರಿ ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ಆರೋಪದಡಿ ಪೊಲೀಸರು 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೊಳಪಡಿಸಿದ್ದಾರಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT