ಆತ್ಮಹತ್ಯೆ ಮಾಡಿಕೊಂಡ ಕೇಶವ ಕಮಡೊಳಿ 
ರಾಜ್ಯ

ಬೆಳಗಾವಿ: ಡ್ಯೂಟಿ ಬದಲಿಸದಿದ್ದಕ್ಕೆ ಬೇಸರ; ಬಸ್‌ನಲ್ಲೇ KSRTC ಮೆಕ್ಯಾನಿಕ್ ಆತ್ಮಹತ್ಯೆ

ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಕೊಟ್ಟಿದ್ದರು, ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಎಂದು ಬೇಸರಗೊಂಡು ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬೆಳಗಾವಿಯ ಡಿಪೋ 1 ರಲ್ಲಿ ಘಟನೆ ನಡೆದಿದೆ. ‌

ಮೃತ ನೌಕರನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬಸ್‌ಗಳ ಪಂಚರ್‌ ತೆಗೆಯುವ ಕೆಲಸ‌ ಮಾಡುತ್ತಿದ್ದರು. ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಕೊಟ್ಟಿದ್ದರು, ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಪೋ ಮ್ಯಾನೇಜರ್ ಲಿಂಗರಾಜ್ ಲಾಠಿ, ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್‌ಗೆ ಕುಟುಂಬಸ್ಥರು ಮನವಿ ಮಾಡಿದ್ದರು ಎನ್ನಲಾಗಿದೆ.

ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅಧಿಕಾರಿಗಳ ವಿರುದ್ಧ ಮೃತ ಕೇಶವ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?