ಆತ್ಮಹತ್ಯೆ ಮಾಡಿಕೊಂಡ ಕೇಶವ ಕಮಡೊಳಿ 
ರಾಜ್ಯ

ಬೆಳಗಾವಿ: ಡ್ಯೂಟಿ ಬದಲಿಸದಿದ್ದಕ್ಕೆ ಬೇಸರ; ಬಸ್‌ನಲ್ಲೇ KSRTC ಮೆಕ್ಯಾನಿಕ್ ಆತ್ಮಹತ್ಯೆ

ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಕೊಟ್ಟಿದ್ದರು, ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಎಂದು ಬೇಸರಗೊಂಡು ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬೆಳಗಾವಿಯ ಡಿಪೋ 1 ರಲ್ಲಿ ಘಟನೆ ನಡೆದಿದೆ. ‌

ಮೃತ ನೌಕರನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬಸ್‌ಗಳ ಪಂಚರ್‌ ತೆಗೆಯುವ ಕೆಲಸ‌ ಮಾಡುತ್ತಿದ್ದರು. ಬೆನ್ನು ನೋವಿದ್ದರೂ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಕೊಟ್ಟಿದ್ದರು, ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಪೋ ಮ್ಯಾನೇಜರ್ ಲಿಂಗರಾಜ್ ಲಾಠಿ, ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್‌ಗೆ ಕುಟುಂಬಸ್ಥರು ಮನವಿ ಮಾಡಿದ್ದರು ಎನ್ನಲಾಗಿದೆ.

ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅಧಿಕಾರಿಗಳ ವಿರುದ್ಧ ಮೃತ ಕೇಶವ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Bengaluru: ಪತ್ನಿ ಜತೆಗಿನ ಲೈಂಗಿಕ ಕ್ರಿಯೆ video ಶೇರ್! ಸ್ನೇಹಿತರೊಂದಿಗೆ ಮಲಗಲು 'ಪಾಪಿ ಪತಿ​' Syed ಒತ್ತಾಯ, ದೂರು ದಾಖಲು!

Cinema Ticket Price: ಸಿನಿಮಾ ಟಿಕೆಟ್ ದರ ಮಿತಿ ತಡೆಯಾಜ್ಞೆ ವಿಸ್ತರಿಸಿದ Karnataka HC; ಮಾರಾಟ, ಮರುಪಾವತಿಗೆ ನಿರ್ದೇಶನ!

SCROLL FOR NEXT