ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ 
ರಾಜ್ಯ

ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ಎಲ್ಲಾ ವರ್ಗದ ಜನರು ಸಂತೋಷಪಡುವಂತಹ ಉಡುಗೊರೆ: ಡಿ.ಕೆ ಶಿವಕುಮಾರ್

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜ್ಯ ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ನಗರದ ಅತಿ ಹೆಚ್ಚು ಯೋಜನೆಗಳಿಗೆ ಸಹಾಯ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಸುಮಾರು 1 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

4 ಲಕ್ಷ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಆದ್ಯತೆ ನೀಡಲಾಗಿದ್ದು, ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ನೀಡಲಾಗಿದೆ. ರಾಜ್ಯ ಸರ್ಕಾರ ಸಾಲ ಮಾಡಿದೆ ಎನ್ನುವುದಾದರೆ ಕೇಂದ್ರ ಸರ್ಕಾರವೂ ಸಾಲ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವ ಬಜೆಟ್ ಮಂಡಿಸಲಾಗಿದೆ” ಎಂದು ತಿಳಿಸಿದರು.

1989ರಿಂದ ಶಾಸಕನಾಗಿ ಆಯ್ಕೆಯಾಗಿದ್ದು, ನನ್ನ 36 ವರ್ಷಗಳ ರಾಜಕೀಯ ಪಯಣದಲ್ಲಿ ಇದು ಐತಿಹಾಸಿಕ, ಜನಪರವಾದ, ಎಲ್ಲ ವರ್ಗದ ಜನರಿಗೂ ನ್ಯಾಯ ಕೊಡಿಸುವ ದೂರದೃಷ್ಟಿಯ ಬಜೆಟ್” ಎಂದು ತಿಳಿಸಿದರು. ನಾವು ಎಲ್ಲಾ ವರ್ಗದವರನ್ನು ಓಲೈಕೆ ಮಾಡಬೇಕಲ್ಲವೇ. ಎಲ್ಲರನ್ನು ಸಮಾನವಾಗಿ ನೋಡಬೇಕು” ಎಂದು ತಿಳಿಸಿದರು. ಇದು ಕೇವಲ ನನ್ನ ಕನಸಲ್ಲ. ರಾಜ್ಯ ಹಾಗೂ ದೇಶದ ಕನಸು. ಕೇಂದ್ರ ಸರ್ಕಾರವಂತೂ ಬೆಂಗಳೂರಿಗೆ ಏನು ನೀಡಲಿಲ್ಲ. ನಮ್ಮ ಸರ್ಕಾರವಾದರೂ ನೀಡಬೇಕಲ್ಲವೇ” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT