ತುಂಗಾಭದ್ರ ಎಡದಂಡೆ ಕಾಲುವೆ ಬಳಿ ಪೊಲೀಸರ ಪರಿಶೀಲನೆ 
ರಾಜ್ಯ

ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಲೆಗೆ ತಳ್ಳಿದ್ದ ಒಡಿಶಾದ ಯುವಕನ ಮೃತದೇಹ ಪತ್ತೆ

ದುಷ್ಕರ್ಮಿಗಳು ಒಡಿಶಾದ ಬಿಬಾಶ್‌ನನ್ನು ಕಾಲುವೆಯಲ್ಲಿ ಬೀಸಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆಯಿಂದಲೇ ಆತನ ಪತ್ತೆಗೆ ಶೋಧ ಕಾರ್ಯ ನಡೆದಿತ್ತು.

ಹುಬ್ಬಳ್ಳಿ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ನಡೆದಿದ್ದ ಗಲಾಟೆ ವೇಳೆ ನಾಪತ್ತೆಯಾಗಿದ್ದ ಒಡಿಶಾದ ಬಿಬಾಶ್‌ (26) ಎಂಬ ಪ್ರವಾಸಿಗನ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಇಸ್ರೇಲ್‌, ಅಮೆರಿಕ, ಒಡಿಶಾ, ಮಹಾರಾಷ್ಟ್ರ ಮತ್ತು ಸ್ಥಳೀಯ ಹೋಂ ಸ್ಟೇನ ಒಡತಿಯೊಬ್ಬರು ಗಿಟಾರ್‌ ಬಾರಿಸುತ್ತ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಇವರ ಮೇಲೆ ಹಲ್ಲೆ ಮಾಡಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವೇಳೆ ದುಷ್ಕರ್ಮಿಗಳು ಒಡಿಶಾದ ಬಿಬಾಶ್‌ ನನ್ನು ಕಾಲುವೆಯಲ್ಲಿ ಬೀಸಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆಯಿಂದಲೇ ಆತನ ಪತ್ತೆಗೆ ಶೋಧ ಕಾರ್ಯ ನಡೆದಿತ್ತು. ಮಲ್ಲಾಪುರ ಗ್ರಾಮದ ಪವರ್‌ ಹೌಸ್‌ ಗೇಟ್‌ ಬಳಿ ಮೃತದೇಹ ಲಭಿಸಿದೆ.

ಗುರುವಾರ ರಾತ್ರಿ ಕೊಪ್ಪಳ ಜಿಲ್ಲೆಯ ಆನೆಗುಂಡಿಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಯ (ಟಿಎಲ್‌ಬಿಸಿ) ದಡದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರು ಪ್ರವಾಸಿಗರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ.

ಪ್ರವಾಸಿಗರನ್ನು ಅಮೆರಿಕದ ಡೇನಿಯಲ್, ಇಸ್ರೇಲ್‌ನ ನೀಮಾ ತಲಾ (ಹೆಸರು ಬದಲಾಯಿಸಲಾಗಿದೆ), ಮಹಾರಾಷ್ಟ್ರದ ನಾಸಿಕ್‌ನ ಪಂಕಜ್ ಪಟೇಲ್ ಮತ್ತು ಒಡಿಶಾದ ಬಿಬಾಸ್ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ನೀಮಾ ತಲಾ ಸ್ಥಳೀಯ ಪೊಲೀಸರಿಗೆ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ದಾಖಲಿಸಿದ್ದಾರೆ. ಮೂವರು ಪ್ರವಾಸಿಗರಿಗೆ ಗಂಗಾವತಿ ಉಪ-ವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಆನೆಗುಂಡಿ ಬಳಿ ಹೋಂಸ್ಟೇ ನಡೆಸುತ್ತಿರುವ ಅಂಬಿಕಾ ನಾಯಕ್, ಪ್ರವಾಸಿಗರನ್ನು ಟಿಎಲ್‌ಬಿಸಿ ಪ್ರದೇಶಕ್ಕೆ ವೀಕ್ಷಣೆಗಾಗಿ ಕರೆದೊಯ್ದಾಗ ಈ ಘಟನೆ ನಡೆದಿದೆ. ದೂರಿನ ಪ್ರಕಾರ, ಕಾರಿನಲ್ಲಿ ಬಂದ ಮೂವರು ವ್ಯಕ್ತಿಗಳು ನೀಮಾ ತಲಾ ಮತ್ತು ಅಂಬಿಕಾ ನಾಯಕ್ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದರು. ಮಹಿಳೆಯರ ಮೇಲೆ ದಾಳಿ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ತಡೆಯಲು ಪ್ರಯತ್ನಿಸಿದಾಗ ಡೇನಿಯಲ್, ಪಟೇಲ್ ಮತ್ತು ಬಿಬಾಸ್ ಅವರನ್ನು ಕಾಲುವೆಗೆ ತಳ್ಳಲಾಯಿತು. ಡೇನಿಯಲ್ ಮತ್ತು ಪಟೇಲ್ ಈಜಿಕೊಂಡು ಸುರಕ್ಷಿತವಾಗಿ ತಲುಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT