ತುಂಗಭದ್ರಾ ನದಿ 
ರಾಜ್ಯ

ಗದಗ: ಈಜು ಬಾರದೆ ತುಂಗಭದ್ರಾ ನದಿಗೆ ಇಳಿದ ಸ್ನೇಹಿತರನ್ನು ಉಳಿಸಲು ಹೋಗಿ ಜನ್ಮದಿನದಂದೇ ಮಸಣ ಸೇರಿದ ಯುವಕ, ಮೂವರು ಸಾವು!

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಶಿರಹಟ್ಟಿಯ 34 ವರ್ಷದ ಶರಣಪ್ಪ ಬಡಿಗೇರ, 36 ವರ್ಷದ ಮಹೇಶ್ ಮತ್ತು 38 ವರ್ಷದ ಗುರುನಾಥ್ ಎಂದು ಗುರುತಿಸಲಾಗಿದೆ. ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ಹೋಗಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ್ ನದಿಗೆ ಇಳಿದಿದ್ದನು. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶನ್ ನನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ನದಿಯಲ್ಲಿ ಮುಳುಗಿರುವವರಿಗಾಗಿ ಶೋಧ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT