ತುಂಗಭದ್ರಾ ನದಿ 
ರಾಜ್ಯ

ಗದಗ: ಈಜು ಬಾರದೆ ತುಂಗಭದ್ರಾ ನದಿಗೆ ಇಳಿದ ಸ್ನೇಹಿತರನ್ನು ಉಳಿಸಲು ಹೋಗಿ ಜನ್ಮದಿನದಂದೇ ಮಸಣ ಸೇರಿದ ಯುವಕ, ಮೂವರು ಸಾವು!

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ಆಂಜನೇಯನ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಶಿರಹಟ್ಟಿಯ 34 ವರ್ಷದ ಶರಣಪ್ಪ ಬಡಿಗೇರ, 36 ವರ್ಷದ ಮಹೇಶ್ ಮತ್ತು 38 ವರ್ಷದ ಗುರುನಾಥ್ ಎಂದು ಗುರುತಿಸಲಾಗಿದೆ. ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ಹೋಗಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ್ ನದಿಗೆ ಇಳಿದಿದ್ದನು. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶನ್ ನನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ನದಿಯಲ್ಲಿ ಮುಳುಗಿರುವವರಿಗಾಗಿ ಶೋಧ ನಡೆಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT