ತುಂಗಭದ್ರಾ ಎಡದಂಡೆ ನಾಲೆಗೆ ಬಿದ್ದಿದ್ದ ಯುವಕನ ಶವ ಪತ್ತೆ 
ರಾಜ್ಯ

ಕೊಪ್ಪಳ: ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನಕ್ಕೆ 6 ತಂಡ ರಚನೆ

ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು.

ಕೊಪ್ಪಳ: ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿರುವ ವೇಳೆಯಲ್ಲಿ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ., ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು.

ಪುರುಷ ಪ್ರವಾಸಿಗರಲ್ಲಿ ಒಬ್ಬರು ಅಮೆರಿಕದವನಾಗಿದ್ದು. ಇತರರಲ್ಲಿ ಒಬ್ಬ ಒಡಿಶಾ ಮತ್ತು ಮಹಾರಾಷ್ಟ್ರದವರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ನಾವೆಲ್ಲರೂ ಸಂಗೀತ ಕೇಳುತ್ತಾ ಆನಂದಿಸುತ್ತಿದ್ದಾಗ, ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಪುರುಷರು ಪೆಟ್ರೋಲ್ ಎಲ್ಲಿ ಸಿಗುತ್ತದೆ ಎಂದು ಕೇಳಿದರು, ಹತ್ತಿರದಲ್ಲಿ ಪೆಟ್ರೋಲ್ ಪಂಪ್‌ಗಳಿಲ್ಲ ಎಂದು ನಾನು ತಿಳಿಸಿದಾಗ, ಆರೋಪಿಗಳು 100 ರೂ.ಗಳಿಗೆ ಬೇಡಿಕೆ ಇಟ್ಟರು ಎಂದು ಹೋಂಸ್ಟೇ ನಿರ್ವಾಹಕಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಕೆ ಮತ್ತು ಪ್ರವಾಸಿಗರು ಹಣ ನೀಡಲು ನಿರಾಕರಿಸಿದಾಗ, ಕನ್ನಡ ಮತ್ತು ತೆಲುಗು ಮಾತನಾಡುತ್ತಿದ್ದ ಆರೋಪಿಗಳು ಅವರನ್ನು ನಿಂದಿಸಲು ಪ್ರಾರಂಭಿಸಿದರು. ನಂತರ ಅವರು ಆಕೆಯ ಮತ್ತು ಇಸ್ರೇಲಿ ಪ್ರವಾಸಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಮೂವರು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಪ್ರವಾಸಿಗರಲ್ಲಿ ಇಬ್ಬರು ಗಾಯಗೊಂಡಿದ್ದಾರೆ, ಒಡಿಶಾದ ಒಬ್ಬ ವ್ಯಕ್ತಿಯ ದೇಹ ಪತ್ತೆಯಾಗಿದೆ ಎಂದು ಅವರು ಹೇಳಿದರು.

ದೂರಿನ ಆಧಾರದ ಮೇಲೆ, ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಸುಲಿಗೆ, ದರೋಡೆ ,ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯತ್ನಕ್ಕೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಮಹಿಳೆಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಶಂಕಿತರನ್ನು ಗುರುತಿಸಿದ್ದೇವೆ. ಆರೋಪಿಗಳ ಪತ್ತೆಗಾಗಿ ಆರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel