ರಾಜ್ಯ

ಹಾಸನದಲ್ಲಿ ಕಟ್ಟಡ ದುರಂತ: ಪಾಳು ಬಿದ್ದ ಕಟ್ಟಡ ಕುಸಿದು ಮೂವರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!

ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ: ಹಾಸನದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಸಹ ಗಂಭೀರಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಅಂಗಡಿಗಳಿದ್ದ ಹಳೆಯ ಕಟ್ಟಡ ಇದಾಗಿದ್ದು ಇದರಲ್ಲಿ ಅಂಗಡಿಗುತ್ತಿತ್ತು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದಾರೆ. ಈ ವೇಳೆ ಕಟ್ಟಡದ ಸಬ್ಜಾ ಕುಸಿದುಬಿದ್ದಿದೆ. ಇನ್ನು  ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT