ಬೆಂಗಳೂರಿನಲ್ಲಿ ಮಳೆ 
ರಾಜ್ಯ

Bengaluru Rains: ಬೆಂಗಳೂರಿನಲ್ಲಿ ಬೇಸಿಗೆ ಮಳೆ: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ವರ್ಷಧಾರೆ!

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​ಸೇರಿದಂತೆ ಹಲವೆಡೆ ಮಳೆಯಾಗಿದೆ.

ಬೆಂಗಳೂರು: ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ.

ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​ಸೇರಿದಂತೆ ಹಲವೆಡೆ ಮಳೆಯಾಗಿದೆ. ಅಂತೆಯೇ ಭಾರಿ ಗಾಳಿಯಿಂದಾಗಿ ಮೋಡಗಳಲ್ಲಿಯೂ ಚಲನೆ ಕಂಡುಬಂದಿದ್ದು, ಮಳೆ ಮೋಡಗಳು ಈಶಾನ್ಯ ಬೆಂಗಳೂರಿನಿಂದ ದಕ್ಷಿಣದತ್ತ ಚಲಿಸುತ್ತಿವೆ. ಪರಿಣಾಮ ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗರದಲ್ಲೂ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ HAL, ಮಾರತ್ ಹಳ್ಳಿ, ವೈಟ್‌ಫೀಲ್ಡ್‌, ಲಾಲ್‌ಬಾಗ್, ರಿಚ್ ಮಂಡ್ ಸರ್ಕಲ್, ಸುತ್ತಾ ಸಣ್ಣ ಪ್ರಮಾಣದ ಮಳೆಯಾಗಿದ್ದು, ಅವಲಹಳ್ಳಿಯಲ್ಲಿ 2 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕುಸಿದ ತಾಪಮಾನ

ಇನ್ನು ಇಂದು ಸುರಿದ ಮಳೆಯಿಂದಾಗಿ ಬೆಂಗಳೂರಿನಲ್ಲಿ ತಾಪಮಾನ ಕುಸಿತವಾಗಿದ್ದು, ಮಧ್ಯಾಹ್ನ 27 ಡಿಗ್ರಿಯಷ್ಟಿದ್ದ ತಾಪಮಾನ ಸಂಜೆ ಮಳೆ ಬಳಿಕ 24 ಡಿಗ್ರಿಗೆ ಕುಸಿದಿದೆ. ಇದು ಬೇಸಿಗೆಯ ಮೊದಲ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ.

ಮಾರ್ಚ್ 14ರವರೆಗೂ ಮಳೆ

ರಾಜ್ಯದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್‌ 14ರವರೆಗೆ ಸುಡುವ ಬೇಸಿಗೆ ನಡುವೆಯೂ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ 10ರಿಂದ ಪೂರ್ವ ಮುಂಗಾರು ಮಾರುತ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಮಾರ್ಚ್14ರವರೆಗೆ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು & ಚಾಮರಾಜನಗರ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT