ಬೆಂಗಳೂರಿನಲ್ಲಿ ಮಳೆ 
ರಾಜ್ಯ

Bengaluru Rains: ಬೆಂಗಳೂರಿನಲ್ಲಿ ಬೇಸಿಗೆ ಮಳೆ: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ವರ್ಷಧಾರೆ!

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​ಸೇರಿದಂತೆ ಹಲವೆಡೆ ಮಳೆಯಾಗಿದೆ.

ಬೆಂಗಳೂರು: ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ನಗರದ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ.

ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​ಸೇರಿದಂತೆ ಹಲವೆಡೆ ಮಳೆಯಾಗಿದೆ. ಅಂತೆಯೇ ಭಾರಿ ಗಾಳಿಯಿಂದಾಗಿ ಮೋಡಗಳಲ್ಲಿಯೂ ಚಲನೆ ಕಂಡುಬಂದಿದ್ದು, ಮಳೆ ಮೋಡಗಳು ಈಶಾನ್ಯ ಬೆಂಗಳೂರಿನಿಂದ ದಕ್ಷಿಣದತ್ತ ಚಲಿಸುತ್ತಿವೆ. ಪರಿಣಾಮ ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗರದಲ್ಲೂ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ HAL, ಮಾರತ್ ಹಳ್ಳಿ, ವೈಟ್‌ಫೀಲ್ಡ್‌, ಲಾಲ್‌ಬಾಗ್, ರಿಚ್ ಮಂಡ್ ಸರ್ಕಲ್, ಸುತ್ತಾ ಸಣ್ಣ ಪ್ರಮಾಣದ ಮಳೆಯಾಗಿದ್ದು, ಅವಲಹಳ್ಳಿಯಲ್ಲಿ 2 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕುಸಿದ ತಾಪಮಾನ

ಇನ್ನು ಇಂದು ಸುರಿದ ಮಳೆಯಿಂದಾಗಿ ಬೆಂಗಳೂರಿನಲ್ಲಿ ತಾಪಮಾನ ಕುಸಿತವಾಗಿದ್ದು, ಮಧ್ಯಾಹ್ನ 27 ಡಿಗ್ರಿಯಷ್ಟಿದ್ದ ತಾಪಮಾನ ಸಂಜೆ ಮಳೆ ಬಳಿಕ 24 ಡಿಗ್ರಿಗೆ ಕುಸಿದಿದೆ. ಇದು ಬೇಸಿಗೆಯ ಮೊದಲ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪನೆಯ ವಾತಾವರಣ ಸಿಕ್ಕಂತಾಗಿದೆ.

ಮಾರ್ಚ್ 14ರವರೆಗೂ ಮಳೆ

ರಾಜ್ಯದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್‌ 14ರವರೆಗೆ ಸುಡುವ ಬೇಸಿಗೆ ನಡುವೆಯೂ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್ 10ರಿಂದ ಪೂರ್ವ ಮುಂಗಾರು ಮಾರುತ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಮಾರ್ಚ್14ರವರೆಗೆ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು & ಚಾಮರಾಜನಗರ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!