ರನ್ಯಾ ರಾವ್ 
ರಾಜ್ಯ

ರನ್ಯಾ ರಾವ್ ಗೆ 12 ಎಕರೆ ಭೂಮಿ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರ; ಹಣ ಪಾವತಿಸದ ಕಾರಣ ಹಸ್ತಾಂತರ ಮಾಡಿಲ್ಲ: ಎಂ.ಬಿ ಪಾಟೀಲ್

ನಿಗದಿತ ಸಮಯದೊಳಗೆ ಕಂಪನಿಯು ಅಗತ್ಯ ಮೊತ್ತವನ್ನು ಪಾವತಿಸದ ಕಾರಣ ಅಧಿಕೃತವಾಗಿ ಭೂಮಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಸಚಿವರ ಎಂಬಿ ಪಾಟೀಲ್ ತಿಳಿಸಿದರು.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್‌ಗೆ ಸಂಬಂಧಿಸಿದ ಕ್ಸಿರೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಮಂಜೂರಾದ 12 ಎಕರೆ ಭೂಮಿಯನ್ನು ಅಧಿಕೃತವಾಗಿ ಹಂಚಿಕೆ ಮಾಡಲಾಗಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೋಮವಾರ ಹೇಳಿದ್ದಾರೆ.

ತುಮಕೂರಿನ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಸಂಸ್ಥೆಗೆ 12 ಎಕರೆ ಮಂಜೂರು ಮಾಡುವ ನಿರ್ಧಾರವನ್ನು ಜನವರಿ 2, 2023 ರಂದು ನಡೆದ 137 ನೇ ರಾಜ್ಯ ಮಟ್ಟದ ಏಕ ಗವಾಕ್ಷಿ ತೆರವು ಸಮಿತಿ (SLSWCC) ಸಭೆಯಲ್ಲಿ ತೆಗೆದುಕೊಳ್ಳಲಾಗಿತ್ತು. ಆ ಸಮಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಮೇ 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು.

ನಿಗದಿತ ಸಮಯದೊಳಗೆ ಕಂಪನಿಯು ಅಗತ್ಯ ಮೊತ್ತವನ್ನು ಪಾವತಿಸದ ಕಾರಣ ಅಧಿಕೃತವಾಗಿ ಭೂಮಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಸಚಿವರು ತಿಳಿಸಿದರು.

ಸ್ಟೀಲ್ ಟಿಎಂಟಿ ಬಾರ್‌ಗಳು, ರಾಡ್‌ಗಳು ಮತ್ತು ಅದಕ್ಕೆ ಸಂಬಂಧಿಸಿದ ಉತ್ಪನ್ನಗಳ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಕಂಪನಿಯು ಪ್ರಸ್ತಾವನೆಯನ್ನು ಸಲ್ಲಿಸಿದ್ದು, 138 ಕೋಟಿ ರೂ. ಈ ಯೋಜನೆಯು ಸರಿಸುಮಾರು 160 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

ಮುರಗೇಶ ನಿರಾಣಿ ಸ್ಪಷ್ಟನೆ

ನಟಿ ರನ್ಯಾ ರಾವ್‌ಗೆ ಸೇರಿದ ಸಂಸ್ಥೆಗೆ ಭೂಮಿ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಅದಕ್ಕಾಗಿಯೇ ಪ್ರತ್ಯೇಕ ಸಮಿತಿ ಇದ್ದು, ಆ ಸಮಿತಿಯಲ್ಲೇ ಆದ ನಿರ್ಧಾರದಂತೆ ಹಂಚಿಕೆಯಾಗಿದೆ ಎಂದು ಕೈಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ, ರನ್ಯಾ ರಾವ್‌ ಎಂಬ ಉದ್ಯಮಿ 2022ರಲ್ಲಿ 12 ಎಕರೆ ಭೂಮಿ ಬೇಕೆಂದು ಅರ್ಜಿ ಕೊಟ್ಟಿದ್ದರು. 2023ರ ಜನವರಿಯಲ್ಲಿ ಅದು ಕ್ಲಿಯರ್‌ ಆಗಿದೆ. ಇದರಲ್ಲಿ ಕೈಗಾರಿಕಾ ಸಚಿವರದ್ದಾಗಲಿ, ನಮ್ಮ ಹಿರಿಯ ಅಧಿಕಾರಿಗಳದ್ದಾಗಲಿ ಯಾವುದೇ ರೀತಿಯ ಕಾನೂನು ಲೋಪದೋಷಗಳಾಗಿಲ್ಲ.

ಅವರ ಪರವಾಗಿ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯ ಅನುಮಾನಗಳಿದ್ದರೆ ನನ್ನನ್ನು ನೇರವಾಗಿ ಸಂಪರ್ಕ ಮಾಡಬಹುದು ಎಂದರು. ನಾನು ಕೈಗಾರಿಕಾ ಸಚಿವನಾಗಿದ್ದ ಅವಧಿಯಲ್ಲಿ ಕಾನೂನು ಪ್ರಕಾರ, ಜಮೀನು ಮಂಜೂರು ಮಾಡಲಾಗಿತ್ತು. 2022ರಲ್ಲಿ 12 ಎಕರೆ ಜಮೀನಿಗಾಗಿ ಮನವಿ ಸಲ್ಲಿಸಿದ್ದರು.

ತುಮಕೂರು ಜಿಲ್ಲೆ ಶಿರಾ ಕೈಗಾರಿಕಾ ಪ್ರದೇಶದಲ್ಲಿನ ಜಮೀನಿನಲ್ಲಿ 138 ಕೋಟಿ ರು. ವೆಚ್ಚದ ಕಬ್ಬಿಣದ ಟಿಎಂಟಿ ಬಾರ್‌ ಮತ್ತು ಕಬ್ಬಿಣ ಉತ್ಪನ್ನ ಉತ್ಪಾದಿಸುವ ಕಾರ್ಖಾನೆ ಆರಂಭಿಸಲಾಗುವುದು.

160 ಜನರಿಗೆ ಉದ್ಯೋಗ ಸಿಗಲಿದೆಯೆಂದು ತಿಳಿಸಿದ್ದರು. 30 ಅಧಿಕಾರಿಗಳ ತಂಡವು ಸಾಧಕ–ಬಾಧಕ ಅಂಶಗಳನ್ನು ಚರ್ಚಿಸಿ, ಜಮೀನು ಮಂಜೂರು ಮಾಡಿತ್ತು ಎಂದು ಅವರು ತಿಳಿಸಿದ್ದಾರೆ.

ಚಿತ್ರನಟಿ ರನ್ಯಾ ರಾವ್‌ ಅಕ್ರಮ ಚಿನ್ನ ಸಾಗಣೆ ಮಾಡಿರುವ ಜಾಲದಲ್ಲಿರುವವರ ಪತ್ತೆಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಜತೆಗೆ ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ಕಂಪೆನಿಗೆ ಜಮೀನು ನೀಡಿರುವುದು ನನ್ನ ಹಂತದವರೆಗೂ ಬಂದಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಹಣ ಪಾವತಿಸುವಂತೆ ನೊಟೀಸ್‌ ನೀಡಲಾಗಿತ್ತು. ಅವರು ಹಣ ಪಾವತಿಸದ ಕಾರಣ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ