ಕೆಜೆ.ಜಾರ್ಜ್ 
ರಾಜ್ಯ

KPCL ನೇಮಕಾತಿ ಆದೇಶ ಶೀಘ್ರದಲ್ಲೇ ಪ್ರಕಟ: ಇಂಧನ ಸಚಿವ ಕೆ.ಜೆ ಜಾರ್ಜ್

622 ಹುದ್ದೆಗಳನ್ನು ಭರ್ತಿ ಮಾಡಲು 2017 ರಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. 8 ವರ್ಷಗಳು ಕಳೆದರೂ ನೇಮಕಾತಿ ಆದೇಶ ಸಿಕ್ಕಿಲ್ಲ. ಮನುಷ್ಯನ ಆಯುಷ್ಯ 80 ವರ್ಷ ಎಂದುಕೊಂಡಿದ್ದೀರೋ? 800 ವರ್ಷ ಎಂದುಕೊಂಡಿದ್ದೀರೋ?

ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಗೆ ನೇಮಕಗೊಂಡ 622 ಸಿಬ್ಬಂದಿಗೆ ಶೀಘ್ರದಲ್ಲೇ ನೇಮಕಾತಿ ಆದೇಶಗಳನ್ನು ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಸೋಮವಾರ ಹೇಳಿದರು.

ಬಿಜೆಪಿಯ ಶರಣು ಸಲಗಾರ್‌ ಅವರು ಗಮನ ಸೆಳೆಯುವ ನಿರ್ಣಯದ ಸಮಯದಲ್ಲಿ, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 394 ಮತ್ತು ಹೈ-ಕೇತರ ಪ್ರದೇಶಕ್ಕೆ 228 ಮೀಸಲಾದ ಸಹಾಯಕ ಎಂಜಿನಿಯರ್‌ಗಳು, ಕಿರಿಯ ಎಂಜಿನಿಯರ್‌ಗಳು, ರಸಾಯನಶಾಸ್ತ್ರಜ್ಞರು ಮತ್ತು ರಾಸಾಯನಿಕ ಮೇಲ್ವಿಚಾರಕರ 622 ಹುದ್ದೆಗಳನ್ನು ಭರ್ತಿ ಮಾಡಲು 2017 ರಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. 8 ವರ್ಷಗಳು ಕಳೆದರೂ ನೇಮಕಾತಿ ಆದೇಶ ಸಿಕ್ಕಿಲ್ಲ. ಮನುಷ್ಯನ ಆಯುಷ್ಯ 80 ವರ್ಷ ಎಂದುಕೊಂಡಿದ್ದೀರೋ? 800 ವರ್ಷ ಎಂದುಕೊಂಡಿದ್ದೀರೋ? ಎಂದು ಸರಕಾರವನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವರು, 2017ರಲ್ಲಿ ಅಧಿಸೂಚನೆ ಆಗಿದ್ದು ನಿಜ. ಆದರೆ, ಪ್ರಕರಣ ಹೈಕೋರ್ಟ್‌ ಅಂಗಳದಲ್ಲಿದೆ. ನ್ಯಾಯಾಲಯದ ಆದೇಶದ ಮೇರೆಗೆ 2024ರ ಸೆ.17 ರಂದು ಸಂಭಾವ್ಯ ಆಯ್ಕೆ ಪಟ್ಟು ಬಿಡುಗಡೆ ಮಾಡಲಾಗಿತ್ತು. ಈಗಲೂ ಹೈಕೋರ್ಟ್‌ ಆದೇಶಕ್ಕೆ ಒಳಪಟ್ಟು 1 ವಾರದಲ್ಲಿ ನೇಮಕಾತಿ ಆದೇಶ ನೀಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT