ರಾಜ್ಯ

'ನನ್ನ ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ': ಸುಮಲತಾ

ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ.

ಡೆವಿಲ್ ಶೂಟಿಂಗ್ ಆರಂಭಿಸಿರುವ ನಟ ದರ್ಶನ್ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಎಲ್ಲರನ್ನೂ ಅನ್​ಫಾಲೋ ಮಾಡಿ ಅಚ್ಚರಿ ಮೂಡಿಸಿದ್ದರು. ಮದರ್ ಇಂಡಿಯಾ ಎಂದು ಬಾಯ್ತುಂಬ ಕರೆಯುತ್ತಿದ್ದ ಮಾಜಿ ಸಂಸದೆ ಹಿರಿಯ ನಟಿ ಸುಮಲತಾ ಅವರನ್ನು ಅನ್ ಫಾಲೋ ಮಾಡಿದ್ದು ಇಬ್ಬರ ಮಧ್ಯೆ ಸಂಬಂಧ ಹಳಸಿದೆ ಎಂಬ ಊಹಾಪೋಹಗಳು ಕೇಳಿಬಂತು.

ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ’ ಎಂದಿದ್ದಾರೆ.

ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ

ದರ್ಶನ್ ಅವರು ನನ್ನನ್ನು ಮಾತ್ರವಲ್ಲ ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಬೇಕು. ಸೋಷಿಯಲ್ ಮೀಡಿಯಾದಲ್ಲಿ ಅನ್​ಫಾಲೋ ಮಾಡಿದರೆ ಸಂಬಂಧ ಹಾಳಾಗುತ್ತದೆಯೇ? ಈ ವಿಚಾರವನ್ನು ಕೇಳಿ ನಗಬೇಕಾ, ಬೇಸರಗೊಳ್ಳಬೇಕಾ ಗೊತ್ತಾಗುತ್ತಿಲ್ಲ, ನಾನು ಸೋಷಿಯಲ್ ಮೀಡಿಯಾ ಸಂಬಂಧಕ್ಕೆ ಅಷ್ಟೊಂದು ಬೆಲೆ, ಮಹತ್ವ ಕೊಡುವವಳಲ್ಲ, ಅಷ್ಟೊಂದು ಸಮಯ ಕೂಡ ನನ್ನಲ್ಲಿಲ್ಲ. ಈ ವಿಷಯ ಮಾಧ್ಯಮಗಳಲ್ಲಿ ಬಂದ ಮೇಲಷ್ಟೆ ನನಗೆ ಗೊತ್ತಾಯ್ತು ಎಂದರು.

‘ನನ್ನ ಕೊನೆಯ ಉಸಿರು ಇರುವವರೆಗೂ ದರ್ಶನ್​ ನನ್ನ ಮಗನೇ. ದರ್ಶನ್​ನ ಗುರಿಯಾಗಿಸಿಕೊಂಡು ನಾನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿಲ್ಲ. ನನ್ನ ಪೋಸ್ಟ್ ಗಳಿಗೂ ಕುಟುಂಬ ಸದಸ್ಯರಿಗೂ, ಆಪ್ತರ ಮಧ್ಯೆ ಯಾವುದೇ ಸಂಬಂಧಗಳಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT